ಬ್ರೇಕಿಂಗ್ ನ್ಯೂಸ್
29-10-25 03:16 pm Mangalore Correspondent ಕರಾವಳಿ
ಮಂಗಳೂರು, ಅ.29 : ಸ್ಪೀಕರ್ ಪೀಠವನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡು ಕಳಂಕ ತಂದಿದ್ದಾರೆ ಎಂಬ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭರತ್ ಶೆಟ್ಟಿ ಆರೋಪಕ್ಕೆ ಸ್ಪೀಕರ್ ಯು.ಟಿ. ಖಾದರ್ ಉತ್ತರ ನೀಡಲು ನಿರಾಕರಿಸಿದ್ದಾರೆ. ಎಲ್ಲಿಯೋ ಕುಳಿತು ಮಾತನಾಡಿದ್ದಕ್ಕೆಲ್ಲ ಉತ್ತರ ಕೊಡಲು ಆಗಲ್ಲ. ನಾಳೆ ನಾನು ಕಚೇರಿಯಲ್ಲಿ ಇರುತ್ತೇನೆ, ಲಿಖಿತವಾಗಿ ದೂರು ಕೊಡಲಿ, ಅಗತ್ಯ ಬಿದ್ದರೆ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದಾರೆ.
ಅಮೆರಿಕದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖಾದರ್, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಆರೋಪದ ವಿಚಾರವನ್ನು ಗಮನಿಸಿದ್ದೇನೆ. ಎಲ್ಲದಕ್ಕೂ ಮದ್ದಿದೆ. ಕೆಲವರ ಅಸೂಯೆಗೆ ಮದ್ದು ಇಲ್ಲ. ಹೊಸತಾಗಿ ಮನೆ ಕಟ್ಟುವಾಗ ದೃಷ್ಟಿ ಬೀಳಬಾರದೆಂದು ದೃಷ್ಟಿ ಬೊಂಬೆ ಕಟ್ಟುತ್ತಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ವಿಧಾನಸಭೆಗೆ ಗೌರವ ಸಿಗುವ ಸಂದರ್ಭ ಬಂದಿದೆ. ಇವರ ಆರೋಪ ನಮ್ಮ ವಿಧಾನಸಭೆಗೆ ದೃಷ್ಟಿ ಬೊಂಬೆ ಇದ್ದಂತೆ ಎಂದು ಕಟಕಿಯಾಡಿದರು.
ಶಾಸಕರಿಗೆ ಸವಲತ್ತು ಸೌಲಭ್ಯ ಒದಗಿಸುವುದು ನನ್ನ ಜವಾಬ್ದಾರಿ. ಆ ಕೆಲಸವನ್ನು ಮಾಡಿಸಿದ್ದೇನೆ. ಯಾರೋ ಮಾತನಾಡುತ್ತಾರೆಂದು ಅದಕ್ಕೆಲ್ಲ ಉತ್ತರ ಕೊಡುತ್ತ ಕೂರುವುದಕ್ಕೆ ಆಗುವುದಿಲ್ಲ. ಯಾರಿಗಾದ್ರೂ ಸಂಶಯ ಇದ್ದರೆ ಕಚೇರಿಗೆ ಬರಲಿ, ಸಂಶಯ ನಿವಾರಿಸುತ್ತೇನೆ. ನಾನು ಸಂವಿಧಾನ ಪೀಠದಲ್ಲಿ ಇದ್ದೇನೆ. ಹಾಗಾಗಿ ಯಾರದ್ದೋ ಮಾತಿಗೆಲ್ಲ ಉತ್ತರಿಸಲು ಆಗಲ್ಲ.
ಇವರಿಗೆ ಬೇಕಾಗಿಯೇ ನಾಳೆ ನನ್ನ ಕಚೇರಿಗೆ ಹೋಗುತ್ತೇನೆ. ಅವರು ಹೇಳಿರುವ ವಿಚಾರಗಳನ್ನು ಲಿಖಿತವಾಗಿ ಕೊಟ್ಟರೆ ಅದನ್ನು ಪರಿಶೀಲಿಸುತ್ತೇನೆ. ಏನೇ ಆರೋಪ ಇದ್ದರೂ ಬರೆದು ಕೊಡಲಿ. ಯಾರೋ ಪ್ರಶ್ನೆ ಮಾಡುತ್ತಾರೆಂದು ಉತ್ತರ ಕೊಡಲು ನಾನು ಅವರ ಜನ ಅಲ್ಲ. ಹಿಂದೆ ಮುಂದೆ ಗೊತ್ತಿಲ್ಲದೆ ಮಾತನಾಡಿದ್ದಕ್ಕೆಲ್ಲ ನಾನು ರಾಜಕೀಯ ವ್ಯಕ್ತಿಯಾಗಿದ್ದರೆ ಅದೇ ರೀತಿ ಉತ್ತರ ಕೊಡಬಹುದಿತ್ತು. ಈಗ ನಾನು ರಾಜಕೀಯ ವ್ಯಕ್ತಿಯಲ್ಲ.
ಸಾಂವಿಧಾನಿಕ ಹುದ್ದೆಯಲ್ಲಿದ್ದು ಏನು ಬೇಕಾದರೂ ಮಾತನಾಡಲು ಆಗುತ್ತದಾ.. ನಮ್ಮ ಶಾಸಕರಿಗೆ ಯಾವುದೆಲ್ಲ ಸೌಕರ್ಯ, ಸವಲತ್ತು ಕೊಡಬೇಕೋ ಅದನ್ನು ಕೊಡುವುದು ನನ್ನ ಕರ್ತವ್ಯ. ಇವರಿಗೆ ನನ್ನ ಬಗ್ಗೆ ಡ್ಯಾಮೇಜ್ ಮಾಡುವುದೇ ಉದ್ದೇಶ ಆಗಿದ್ದರೆ ಇಂಥ ಹೇಳಿಕೆಯನ್ನು ದಿನವೂ ಕೊಡುತ್ತ ಇರಲಿ. ನನಗೆ ಸಂತೋಷ ಇದೆ ಎಂದು ಹೇಳುತ್ತ ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ನಿರಾಕರಿಸಿದರು.
Karnataka Legislative Assembly Speaker U.T. Khader has refused to respond to corruption allegations made by former Speaker Vishweshwar Hegde Kageri and MLA Dr. Bharath Shetty, who accused him of misusing the Speaker’s office for personal gain during the renovation of the legislators’ quarters and the Speaker’s chamber.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am