ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm