ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm