ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm