ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am