ಬ್ರೇಕಿಂಗ್ ನ್ಯೂಸ್
31-10-25 09:00 pm Mangalore Correspondent ಕರಾವಳಿ
ಮಂಗಳೂರು, ಅ.31 : ಮಂಗಳೂರು ನಗರದಲ್ಲಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವವರ ವಿರುದ್ಧ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ನೋ ಪಾರ್ಕಿಂಗ್ ವಾಹನ ನಿಲುಗಡೆ ಮಾಡಿದ್ದ ಮಾಲೀಕ, ಚಾಲಕರ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಿದ್ದು ಒಟ್ಟು 23,21,200 ರೂ. ದಂಡ ವಿಧಿಸಲಾಗಿದೆ ಎಂದು ಮಂಗಳೂರು ನಗರ ಸಂಚಾರ ವಿಭಾಗದ ಡಿಸಿಪಿ ರವಿಶಂಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಗರದ ರಸ್ತೆಗಳಲ್ಲಿ ಅನಧಿಕೃತವಾಗಿ ವಾಹನ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಮೂರು ತಿಂಗಳುಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ನೋ ಪಾರ್ಕಿಂಗ್, ಪಾದಚಾರಿ ಮಾರ್ಗದ ಮೇಲೆ ವಾಹನ ನಿಲುಗಡೆ ಸೇರಿದಂತೆ ಅನಧಿಕೃತ ವಾಹನ ನಿಲುಗಡೆ ಮಾಡಿದ್ದ ವಾಹನಗಳ ವಿರುದ್ಧ 4793 ಪ್ರಕರಣಗಳನ್ನು ದಾಖಲಿಸಲಾಗಿದೆ. 23,21,200 ರೂ. ದಂಡ ಸಂಗ್ರಹಿಸಲಾಗಿದೆ ಎಂದು ಹೇಳಿದರು. ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಅಪಘಾತಗಳಾಗುವ ಬ್ಲ್ಯಾಕ್ ಸ್ಪಾಟ್ ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ವೇಗವಾಗಿ ಚಾಲನೆ ಮಾಡುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮಾದರಿಯಲ್ಲಿ 562 ಪ್ರಕರಣಗಳನ್ನು ದಾಖಲಿಸಿದ್ದು ₹5.62 ಲಕ್ಷ ದಂಡ ವಿಧಿಸಲಾಗಿದೆ. ಟಿಂಟೆಡ್ ಗ್ಲಾಸ್ ಉಪಯೋಗಿಸಿದ 5865 ವಾಹನಗಳನ್ನು ಗುರುತಿಸಿ ₹24.85 ಲಕ್ಷ ದಂಡ ವಿಧಿಸಲಾಗಿದೆ ಎಂದರು.



ಇದಲ್ಲದೆ, ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರ ನಡುವಿನ ಅವಧಿಯಲ್ಲಿ ಕಳ್ಳತನವಾಗಿದ್ದ 233 ಮೊಬೈಲ್ ಫೋನ್ ಗಳನ್ನು ವಶಪಡಿಸಿ ಅದರ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್.ಎನ್ ತಿಳಿಸಿದ್ದಾರೆ.
The Mangaluru City Police have intensified their action against illegal and no-parking violations across the city. In the past three months, police have registered 4,793 cases against vehicle owners and drivers for parking in “No Parking” zones and have collected a total of ₹23,21,200 in fines, said DCP (Traffic) Ravishankar.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm