ಬ್ರೇಕಿಂಗ್ ನ್ಯೂಸ್
03-11-25 12:37 pm Mangalore Correspondent ಕರಾವಳಿ
ಮಂಗಳೂರು, ನ.3 : ಬೆಂಗಳೂರಿನ ಕುಂಬಳಗೋಡಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಯೊಬ್ಬರು ಭಾನುವಾರ ಸಸಿಹಿತ್ಲು ಬೀಚ್ ಬಳಿಯ ನಂದಿನಿ ನದಿ ಅಳಿವೆಯಲ್ಲಿ ಈಜಾಡಲು ಹೋಗಿ ನೀರುಪಾಲಾಗಿದ್ದಾರೆ.
ಬೆಂಗಳೂರು ಗಿರಿನಗರ 80 ಅಡ್ಡ ರಸ್ತೆ ನಿವಾಸಿ ಪ್ರಸನ್ನ ಸಿ.ಎಲ್. ಎಂಬವರ ಪುತ್ರ ಪ್ರಣವ್ ಚಂದ್ರ (24) ನೀರುಪಾಲಾದ ವಿದ್ಯಾರ್ಥಿ. ಒಟ್ಟು ಏಳು ಮಂದಿ ಗೆಳೆಯರು ಶುಕ್ರವಾರ ಮಂಗಳೂರಿಗೆ ಬಂದಿದ್ದು ಎಲ್ಲರೂ ಹೈಸ್ಕೂಲ್, ಪಿಯು ಕಾಲೇಜಿನ ಸಹಪಾಠಿಗಳಾಗಿದ್ದು ಬೇರೆ ಬೇರೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಾಗಿದ್ದರು ಎನ್ನಲಾಗಿದೆ.
ಮಂಗಳೂರಿಗೆ ಬಂದ ಬಳಿಕ ಶುಕ್ರವಾರ ರೂಮ್ನಲ್ಲಿ ತಂಗಿದ್ದು, ಬಳಿಕ ಪ್ರವಾಸಿ ತಾಣಗಳಿಗೆ ತೆರಳಿದ್ದರು. ಭಾನುವಾರ ಸಸಿಹಿತ್ಲು ಬೀಚ್ ಬಳಿಯ ನಂದಿನಿ ನದಿ ಅಳಿವೆಗೆ ಆಗಮಿಸಿ ನೀರಾಟದಲ್ಲಿ ತೊಡಗಿದ್ದ ಸಂದರ್ಭ ಈ ದುರಂತ ಸಂಭವಿಸಿದೆ. ಇವರು ಸಮುದ್ರಕ್ಕೆ ಇಳಿದ ಸ್ಥಳದ ಬಳಿ ನಂದಿನಿ ನದಿ ಅಳಿವೆ ಹೆಜಮಾಡಿ ನೂತನ ಬಂದರಿನ ಬ್ರೇಕ್ವಾಟರ್ ಇದೆ. ಈ ಪ್ರದೇಶದಲ್ಲಿ ಸಮುದ್ರಕ್ಕೆ ಇಳಿಯದಂತೆ ಬೀಚ್ನ ಗೃಹರಕ್ಷಕ ದಳ ಸಿಬ್ಬಂದಿ, ಲೈಫ್ ಗಾರ್ಡ್ ಗಳು ಎಚ್ಚರಿಕೆ ನೀಡಿದ್ದರೂ ಅವರ ಮಾತು ಕೇಳದೆ ದೂರದ ಸ್ಥಳಕ್ಕೆ ಬಂದು ಅಪಾಯಕಾರಿ ಅಳಿವೆ ಜಾಗದಲ್ಲಿ ಇಳಿದಿದ್ದರು. ಅಲೆಗಳಿಗೆ ಸಿಲುಕಿದ್ದ ಪ್ರಣವ್ ಮೊದಲಿಗೆ ಬಂಡೆ ಕಲ್ಲು ಹಿಡಿದುಕೊಂಡು ಪಾರಾಗಲು ಯತ್ನಿಸಿದ್ದರು. ಆದರೆ ಬಂಡೆಯಿಂದ ದೂರವಿದ್ದ ಈ ಸ್ಥಳಕ್ಕೆ ಉಳಿದವರು ಧಾವಿಸಿ ರಕ್ಷಿಸಲು ಯತ್ನಿಸುವಷ್ಟರಲ್ಲಿ ಅವರು ನೀರುಪಾಲಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ, ಸ್ಥಳೀಯರು ಶೋಧ ಕಾರ್ಯ ನಡೆಸಿದ್ದಾರೆ. ಕುಟುಂಬಸ್ಥರು ರಾತ್ರಿ ವೇಳೆ ಸಸಿಹಿತ್ಲು ಕಿನಾರೆ ಬಳಿ ಆಗಮಿಸಿದ್ದಾರೆ.
ಬ್ರೇಕ್ ವಾಟರ್ ಅಪಾಯಕಾರಿ ಸ್ಥಳ
ಅಳಿವೆ ಪಕ್ಕದ ಬ್ರೇಕ್ ವಾಟರ್ ನೂತನ ಹೆಜಮಾಡಿ ಬಂದರಿಗೆ ಸೇರಿದ್ದು ಇದರ ಮೇಲೆ ಯಾರೂ ಹೊಗದಂತೆ ತಡೆಬೇಲಿಯಾಗಲಿ, ಎಚ್ಚರಿಕೆ ಫಲಕವಾಗಲೀ ಇಲ್ಲ. ಮಾತು ಕೇಳದೆ ಯುವಕರು ಬೈಕ್ ನಲ್ಲಿ ಹೋಗುತ್ತಾರೆ. ಗಾಳ ಹಾಕುವವರೂ ಹೋಗುತ್ತಾರೆ ಎನ್ನುತ್ತಾರೆ ಸ್ಥಳೀಯರು.
A 24-year-old engineering student from Bengaluru drowned while swimming near the estuary of the Nandini River at Sasihithlu Beach on Sunday. The deceased has been identified as Pranav Chandra (24), son of Prasanna C.L., a resident of Girinagar 80th Cross, Bengaluru, and a second-year student at a private engineering college in Kumbalgodu.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm