ಬ್ರೇಕಿಂಗ್ ನ್ಯೂಸ್
06-11-25 10:50 pm Mangalore Correspondent ಕರಾವಳಿ
ಮಂಗಳೂರು, ನ.6 : ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದರ ನವೀಕೃತ ಕಚೇರಿ ವಿಶ್ವಸೌಧ ಕಟ್ಟಡ ಉದ್ಘಾಟನೆ ಮತ್ತು ಸೊಸೈಟಿಯ ವಜ್ರಮಹೋತ್ಸವದ ಸಮಾರೋಪ ಸಮಾರಂಭ ನ.9ರಂದು ಕೊಟ್ಟಾರದಲ್ಲಿ ನಡೆಯಲಿದೆ.
ನವೀಕೃತ ವಿಶ್ವಸೌಧ ಕಟ್ಟಡವನ್ನು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಉದ್ಘಾಟಿಸುವರು. ನವೀಕೃತ ಆಡಳಿತ ಕಚೇರಿಯನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಸ್ಪೀಕರ್ ಯುಟಿ ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಕೆನರಾ ಜುವೆಲ್ಲರ್ಸ್ ಮಾಲಕ ಧನಂಜಯ ಪಾಲ್ಕೆ, ಅಯೋಧ್ಯ ರಾಮಲಲ್ಲಾ ಮೂರ್ತಿಯ ನಿರ್ಮಾತೃ ಮೈಸೂರಿನ ಅರುಣ್ ಯೋಗಿರಾಜ್, ಮಂಗಳೂರು ಉತ್ತರ- ದಕ್ಷಿಣ ಕ್ಷೇತ್ರದ ಶಾಸಕರು ಉಪಸ್ಥಿತಿ ಇರಲಿದ್ದಾರೆ ಎಂದು ಸೊಸೈಟಿ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಸೊಸೈಟಿ ಅಸ್ತಿತ್ವಕ್ಕೆ ಬಂದು ಯಶಸ್ವಿ 60 ವರ್ಷಗಳಾಗಿದ್ದು ಈಗ ವಜ್ರ ಮಹೋತ್ಸವ ಆಚರಿಸುತ್ತಿದೆ. ಕಳೆದ 33 ವರ್ಷಗಳಿಂದ ಲೆಕ್ಕ ಪರಿಶೋಧನೆಯಲ್ಲಿ ಎ ವರ್ಗದ ಮಾನ್ಯತೆ ಪಡೆದಿದೆ. 253 ಕೋಟಿ ಠೇವಣಿ ಹೊಂದಿದ್ದು, 240 ಕೋಟಿ ಸಾಲ, 51 ಕೋಟಿ ಹೂಡಿಕೆ ಬಂಡವಾಳ ಹೊಂದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ 18 ಶಾಖೆಗಳಿದ್ದು ವಾರ್ಷಿಕ 18 ಪರ್ಸೆಂಟ್ ಡಿವಿಡೆಂಟ್ ನೀಡಲಾಗುತ್ತಿದೆ. ಚಿನ್ನದ ಕೆಲಸ ಸೇರಿ ಕುಸುರಿ ಕೌಶಲ್ಯದಲ್ಲಿ ಸಾಧನೆ ಮಾಡಿದವರಿಗೆ ಪ್ರತಿ ವರ್ಷ ಎಸ್ ಕೆಜಿಐ ಪಾಲ್ಕೆ ಪ್ರಶಸ್ತಿ ನೀಡುತ್ತ ಬಂದಿದ್ದೇವೆ.
ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ 363 ವಿದ್ಯಾರ್ಥಿಗಳಿಗೆ 11.70 ಲಕ್ಷ ವಿದ್ಯಾರ್ಥಿ ವೇತನ ನೀಡಲಾಗಿದೆ. 2024ನೇ ವರ್ಷವನ್ನು ವಜ್ರ ಮಹೋತ್ಸವ ವರ್ಷವೆಂದು ಆಚರಿಸುತ್ತಿದ್ದು 60 ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ಉಪಾಧ್ಯಕ್ಷ ಆನಂದ ಆಚಾರ್ಯ ಮತ್ತಿತರರು ಇದ್ದರು.
The S.K. Gold Smiths Industrial Co-operative Society will inaugurate its newly renovated ‘Vishwasoudha’ office building and conclude its Diamond Jubilee celebrations on November 9 at Kottara, Mangaluru. The event will see the participation of several dignitaries including ministers and MLAs.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm