ಬ್ರೇಕಿಂಗ್ ನ್ಯೂಸ್
07-11-25 10:58 pm Mangalore Correspondent ಕರಾವಳಿ
ಮಂಗಳೂರು, ನ.7 : ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧಿಸಿ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಇದೀಗ ತಜ್ಞರ ಜಂಟಿ ಕಾರ್ಯಕಾರಿ ಸಮಿತಿ(Joint Working Group)ಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬೆಂಗಳೂರು -ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೇ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಕ್ಯಾ. ಚೌಟ ಅವರು ಕೇಂದ್ರ ಹೆದ್ದಾರಿ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಕ್ಯಾ. ಚೌಟ ಅವರ ಕೋರಿಕೆಗೆ ಸ್ಪಂದಿಸಿ ಹೆದ್ದಾರಿ ಸಚಿವಾಲಯವು ತಜ್ಞರ ಜಂಟಿ ಕಾರ್ಯಕಾರಿ ಸಮಿತಿ ರಚನೆ ಮಾಡಿದೆ.

ರೈಲ್ವೆ ಇಲಾಖೆಯೊಂದಿಗೆ ಶಿರಾಡಿ ಘಾಟ್ ಪ್ರದೇಶದ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ನೇಮಿಸುವ ಕುರಿತು ಪರಿಶೀಲಿಸಲಾಗಿದ್ದು, ಹೆದ್ದಾರಿ ಸಚಿವಾಲಯ, ರೈಲ್ವೇ ಸಚಿವಾಲಯ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಒಳಗೊಂಡ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದೆ. ತಜ್ಞರ ಸಮಿತಿಯು ಶಿರಾಡಿ ಘಾಟ್ ಪ್ರದೇಶದಲ್ಲಿ ರೈಲು ಮತ್ತು ರಸ್ತೆ ಸಂಪರ್ಕಿತ ಸುರಂಗ ಮಾರ್ಗದ ಸಾಧ್ಯತೆ ಹಾಗೂ ಸಾಧಕ- ಬಾಧಕಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದೆ ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕ್ಯಾ.ಚೌಟ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಚೌಟ
ಶಿರಾಡಿ ಘಾಟಿಯಲ್ಲಿ ರೈಲ್ವೇ ಮತ್ತು ಹೆದ್ದಾರಿ ಜಂಟಿ ಸಮೀಕ್ಷೆಗಾಗಿ ತಜ್ಞರ ಜಂಟಿ ಸಮಿತಿ ರಚನೆ ಮಾಡಿರುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಸಂಬಂಧ ದಕ್ಷಿಣ ಕನ್ನಡ ಜನರ ಬಹುದಿನದ ಕನಸು ನನಸಾಗುವ ಮೊದಲ ಹೆಜ್ಜೆಯಾಗಿದೆ. ಶಿರಾಡಿ ಘಾಟಿ ಪ್ರದೇಶದ ಪರಿಸರ ಸೂಕ್ಷ್ಮ ಮತ್ತು ಭೌಗೋಳಿಕ ಸಂಕೀರ್ಣ ಗಮನದಲ್ಲಿಟ್ಟು ಈ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ಜಂಟಿ ಸಮೀಕ್ಷೆ ಕೈಗೊಳ್ಳಲು ಮತ್ತು ಡಿಪಿಆರ್ ಮೇಲ್ವಿಚಾರಣೆಗೆ ತಜ್ಞರ ಸಮಿತಿ ನೇಮಿಸುವಂತೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ರೈಲ್ವೇ ಮತ್ತು NHAI ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಿದ್ದಾರೆ. ಇಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಮಿತಿಯು ರಸ್ತೆ ಮತ್ತು ರೈಲು ಸುರಂಗ ಮಾರ್ಗದ ಕಾರ್ಯ ಸಾಧ್ಯತೆಯನ್ನು ಪರಿಶೀಲಿಸಲಿದೆ. ಇದರೊಂದಿಗೆ ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಡಿಪಿಆರ್ ಪ್ರಕ್ರಿಯೆ ಚುರುಕುಗೊಳ್ಳಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
In a major step toward the Bengaluru–Mangaluru High-Speed Corridor, the Central Government has formed a Joint Working Group (JWG) of experts to conduct a comprehensive survey for the development of both the railway and highway through the Shiradi Ghat, including the possibility of a tunnel route.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm