ಬ್ರೇಕಿಂಗ್ ನ್ಯೂಸ್
13-11-25 01:44 pm HK Staffer ಕರಾವಳಿ
ಕಾಸರಗೋಡು, ನ.13: ಮಂಗಳೂರು–ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಮಾರ್ಗದ ಕುಂಬಳೆಯ ಆರಿಕ್ಕಾಡಿ ಟೋಲ್ ಪ್ಲಾಝಾದಲ್ಲಿ ಶುಲ್ಕ ಸಂಗ್ರಹ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಹೈಕೋರ್ಟ್ ತೀರ್ಪು ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾಸರಗೋಡು ಜಿಲ್ಲಾಧಿಕಾರಿ ಕೆ.ಇಂಬಾಶೇಖರ್ ತಿಳಿಸಿದ್ದಾರೆ.
ನ.12ರಿಂದ ಟೋಲ್ ಸಂಗ್ರಹಿಸುವ ನಿರ್ಧಾರ ವಿರೋಧಿಸಿ ಬುಧವಾರ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಹೇಳಿದ್ದಾರೆ. ಟೋಲ್ ಸಂಗ್ರಹ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಲಾಗಿದ್ದು ನವೆಂಬರ್ 14 ರಂದು ವಿಚಾರಣೆಗೆ ಬರಲಿದೆ. ಅಂತಿಮ ತೀರ್ಪು ಬರುವ ವರೆಗೆ ಟೋಲ್ ಶುಲ್ಕ ಸಂಗ್ರಹಿಸದಿರಲು ಜಿಲ್ಲಾಡಳಿತ ನಿರ್ಧರಿಸಿದೆ.
ಕಾಸರಗೋಡು - ಮಂಗಳೂರು ಹೆದ್ದಾರಿ ಚತುಷ್ಪಥ ಸಲುವಾಗಿ ಕುಂಬಳೆ ಆರಿಕ್ಕಾಡಿಯಲ್ಲಿ ತಾತ್ಕಾಲಿಕವಾಗಿ ಟೋಲ್ ಪ್ಲಾಜಾವನ್ನು ನಿರ್ಮಿಸಲಾಗಿದೆ. 60 ಕಿಮೀ ನಡುವೆ ಒಂದು ಟೋಲ್ ಪ್ಲಾಜಾ ಎನ್ನುವ ನೀತಿ ಪ್ರಕಾರ ಚೆಂಗಳದಲ್ಲಿ ಟೋಲ್ ಕೇಂದ್ರ ಮಾಡಬೇಕಾಗುತ್ತದೆ. ಆದರೆ ಚೆಂಗಳದಲ್ಲಿ ಬೇರೆ ಕಂಪನಿ ಹೆದ್ದಾರಿ ಗುತ್ತಿಗೆ ಪಡೆದಿದ್ದು ಅಲ್ಲಿ ಇನ್ನೂ ಕಾಮಗಾರಿ ಪೂರ್ತಿಯಾಗಿಲ್ಲ. ಹೀಗಾಗಿ ಕಾಸರಗೋಡು- ತಲಪಾಡಿ ಮಧ್ಯೆ ಕಾಮಗಾರಿ ಪೂರ್ತಿ ಆಗಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಕುಂಬಳೆಯಲ್ಲಿ ಶುಲ್ಕ ಸಂಗ್ರಹಿಸಲು ಕಂಪನಿ ಮುಂದಾಗಿದೆ. ಕಂಪನಿಯ ಈ ಕ್ರಮಕ್ಕೆ ಹೆದ್ದಾರಿ ಪ್ರಾಧಿಕಾರವೂ ಒಪ್ಪಿಗೆ ನೀಡಿತ್ತು. ಆದರೆ ಸ್ಥಳೀಯ ಶಾಸಕರು ಮತ್ತು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.
The process of toll collection at the newly established Kumble (Arikkadi) Toll Plaza on the Mangaluru–Kasaragod National Highway has been temporarily postponed. Kasaragod District Collector K. Imbashekar stated that a final decision will be made after the Kerala High Court delivers its verdict. Locals staged a protest on Wednesday opposing the decision to begin toll collection from November 12. Following the protest, Manjeeshwar MLA A.K.M. Ashraf announced that toll collection has been deferred temporarily. A public interest litigation (PIL) challenging the toll collection has been filed in the Kerala High Court, which is scheduled to hear the case on November 14. Until the final judgment, the district administration has decided not to permit toll collection.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
04-12-25 11:15 am
HK News Desk
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
04-12-25 12:38 pm
Mangalore Correspondent
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm