ಬ್ರೇಕಿಂಗ್ ನ್ಯೂಸ್
11-08-20 04:59 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 11: ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತಗಲಿ ಬೈಕ್ ಸಮೇತ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಸುಳ್ಯ ತಾಲೂಕಿನ ಪಡ್ಪಿನಂಗಡಿಯಲ್ಲಿ ನಡೆದಿದೆ.
ಮೃತರನ್ನು ಮಂಡೆಕೋಲು ನಿವಾಸಿ ಉಮೇಶ್ ಗೌಡ (44) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಬಳಿಯ ಬಳ್ಪದಲ್ಲಿ ಆತನ ಹೆಂಡ್ತಿ ಮನೆಯಿದ್ದು ನಿನ್ನೆ ಸಂಜೆ ಬಂದಿದ್ದ ಉಮೇಶ್, ಇಂದು ನಸುಕಿನಲ್ಲಿ 4.30ಕ್ಕೆ ಮನೆಯತ್ತ ಹೊರಟಿದ್ದ. ಮನೆಯಲ್ಲಿ ಹಾಲು ಕರೆಯಲು ಇದೆಯೆಂದು ಬೈಕಿನಲ್ಲಿ ಬೇಗ ಹೊರಟಿದ್ದ ಉಮೇಶ್ ಅರ್ಧ ದಾರಿಯಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ. ನಿಂತಿಕಲ್ಲು ಬಳಿಯ ಪಡ್ಪಿನಂಗಡಿ ಎಂಬಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಮಳೆಯಿಂದ ಒದ್ದೆಯಾಗಿದ್ದ ಬೈಕಿಗೆ ಸುಲಭದಲ್ಲಿ ಪ್ರವಹಿಸಿದ್ದು ಬೆಂಕಿ ಹತ್ತಿಕೊಂಡಿದೆ. ಬೈಕ್ ಮತ್ತು ಸವಾರ ಸ್ಥಳದಲ್ಲಿಯೇ ಹೊತ್ತಿ ಉರಿದಿದ್ದು ಜೀವಂತ ದಹನವಾಗಿದ್ದಾರೆ. 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ಸಮಯದಲ್ಲಿ ರಸ್ತೆಯಲ್ಲಿ ಜನರ ಸಂಚಾರ ಇಲ್ಲದೇ ಇದ್ದುದರಿಂದ 6 ಗಂಟೆ ಬಳಿಕವೇ ಘಟನೆ ಸ್ಥಳೀಯರಿಗೆ ತಿಳಿದುಬಂದಿದೆ.

ಪುತ್ತೂರು - ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಹೈವೇ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದು ಹೇಗೆ ಎನ್ನುವುದು ತಿಳಿದುಬಂದಿಲ್ಲ. ಘಟನೆ ನೋಡಿದರೆ ಬೆಚ್ಚಿ ಬೀಳುವ ರೀತಿಯಿದೆ. ಬೈಕ್ ಮತ್ತು ಅದರಲ್ಲಿನ ಸವಾರ ಬಿದ್ದಿರುವ ಜಾಗದಲ್ಲೇ ಧಗ ಧಗನೆ ಉರಿಯುವ ದೃಶ್ಯ ಮನ ಕಲಕುವಂತಿದೆ.
Video:
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm