ಬ್ರೇಕಿಂಗ್ ನ್ಯೂಸ್
16-11-25 10:48 pm Mangalore Correspondent ಕರಾವಳಿ
ಉಳ್ಳಾಲ, ನ.16 : ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೋರ್ವ ತಾನು ನೆಲೆಸಿದ್ದ ಪಿಜಿಯಿಂದ ನಾಪತ್ತೆಯಾಗಿದ್ದು, ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಲಕ್ಷಾಂತರ ರೂಪಾಯಿ ಕಳಕೊಂಡ ಹಿನ್ನಲೆಯಲ್ಲಿ ಮನನೊಂದು ನಾಪತ್ತೆಯಾಗಿರುವ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ತಿಳಿದುಬಂದಿದೆ.
ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ರಾಬಿಯಾ- ಅಬೂಬಕರ್ ದಂಪತಿಯ ಪುತ್ರ ಮಾಲೀಕ್ ಅಬೂಬಕರ್(19)ನಾಪತ್ತೆಯಾದ ವಿದ್ಯಾರ್ಥಿ. ಮಾಲೀಕ್ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅಲ್ಲೇ ಸಮೀಪದ ಶರೀಫ್ ಎಂಬವರ ಪಿಜಿಯಲ್ಲಿ ವಾಸವಾಗಿದ್ದ. ನ.13ರಂದು ರಾತ್ರಿ ಡಿನ್ನರ್ ಮಾಡಿ ಬರುತ್ತೇನೆಂದು ಹೇಳಿ ಪಿಜಿಯಿಂದ ಸ್ಕೂಟರಲ್ಲಿ ತೆರಳಿದ ಮಾಲೀಕ್ ಮತ್ತೆ ಹಿಂತಿರುಗದೆ ನಾಪತ್ತೆ ಆಗಿದ್ದಾನೆ. ಈ ಬಗ್ಗೆ ಮಾಲೀಕ್ ಮಾವ (ತಾಯಿಯ ತಮ್ಮ) ಫಿಸಿಯೋಥೆರಫಿ ವೈದ್ಯ ಅಝ್ಮಲ್ ಟಿ.ಎ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಮಾಲೀಕ್ ನ ಸ್ಕೂಟರ್ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ದೆಹಲಿಗೆ ತೆರಳುವ ಮಂಗಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಲೀಕ್ ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಮೂರು ಲಕ್ಷ ಹಣವನ್ನು ಕಳೆದುಕೊಂಡಿದ್ದು ಆ ಕಾರಣದಿಂದಲೇ ಮನನೊಂದು ನಾಪತ್ತೆಯಾಗಿದ್ದಾನೆಂದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
A Kerala-origin student studying at a private medical college in Deralakatte has gone missing from his PG accommodation. Preliminary police investigation has revealed that he had reportedly lost several lakhs of rupees through an online gaming app and was mentally disturbed before disappearing.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 09:01 pm
Mangalore Correspondent
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm