ಬ್ರೇಕಿಂಗ್ ನ್ಯೂಸ್
29-12-20 01:11 pm Mangalore Correspondent ಕರಾವಳಿ
ಬಂಟ್ವಾಳ, ಡಿ.29 : ಬಾಯಿ ಹುಣ್ಣಿಗೆ ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾದ ಔಷಧಿ ಬಾಟಲಲ್ಲಿಟ್ಟಿದ್ದ ಕಳೆನಾಶಕ ಸೇವಿಸಿ ಗ್ರಾಪಂ ಚುನಾವಣೆ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ.
ಕಾವಳಮುಡೂರು ಗ್ರಾಮದ, ಅರ್ಗತ್ಯಾರು ನಿವಾಸಿ ಜಯಂತ ಪ್ರಭು(58) ಮೃತಪಟ್ಟವರು. ಡಿ.21ರಂದು ರಾತ್ರಿ 11 ಗಂಟೆಯ ವೇಳೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾಗಿದ್ದ ಔಷಧಿ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೈಕಾಟ್ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧಿಯನ್ನು ಸಿರಪ್ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು.
ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು, ಕೊನೆಕ್ಷಣದ ವರೆಗೂ ಮತದಾರರ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಅವರ ಪುತ್ರ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಜಯಂತ ಪ್ರಭು ಅವರು ಡಿ.22 ರಂದು ನಡೆದ ಗ್ರಾ.ಪಂ. ಚುನಾವಣೆಗೆ ಕಾವಳಮೂಡೂರು ಪಂಚಾಯಿತಿ ವಾರ್ಡ್ 3ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿದ್ದರು.
Jayanth Prabhu (58) from Bantwal lost his life on Monday, December 28 after mistakenly consuming insecticide meant to be sprayed on grass. He thought it to be a medicine he was taking for mouth ulcers.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm