ಬ್ರೇಕಿಂಗ್ ನ್ಯೂಸ್
29-12-20 01:11 pm Mangalore Correspondent ಕರಾವಳಿ
ಬಂಟ್ವಾಳ, ಡಿ.29 : ಬಾಯಿ ಹುಣ್ಣಿಗೆ ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾದ ಔಷಧಿ ಬಾಟಲಲ್ಲಿಟ್ಟಿದ್ದ ಕಳೆನಾಶಕ ಸೇವಿಸಿ ಗ್ರಾಪಂ ಚುನಾವಣೆ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ.
ಕಾವಳಮುಡೂರು ಗ್ರಾಮದ, ಅರ್ಗತ್ಯಾರು ನಿವಾಸಿ ಜಯಂತ ಪ್ರಭು(58) ಮೃತಪಟ್ಟವರು. ಡಿ.21ರಂದು ರಾತ್ರಿ 11 ಗಂಟೆಯ ವೇಳೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾಗಿದ್ದ ಔಷಧಿ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೈಕಾಟ್ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧಿಯನ್ನು ಸಿರಪ್ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು.
ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು, ಕೊನೆಕ್ಷಣದ ವರೆಗೂ ಮತದಾರರ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಅವರ ಪುತ್ರ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಜಯಂತ ಪ್ರಭು ಅವರು ಡಿ.22 ರಂದು ನಡೆದ ಗ್ರಾ.ಪಂ. ಚುನಾವಣೆಗೆ ಕಾವಳಮೂಡೂರು ಪಂಚಾಯಿತಿ ವಾರ್ಡ್ 3ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿದ್ದರು.
Jayanth Prabhu (58) from Bantwal lost his life on Monday, December 28 after mistakenly consuming insecticide meant to be sprayed on grass. He thought it to be a medicine he was taking for mouth ulcers.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm