ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತುಹಾಕಲು ವಿಜಯೇಂದ್ರ ಆಗ್ರಹ 

19-11-25 07:28 pm       Mangalore Correspondent   ಕರಾವಳಿ

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. 

ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. 

ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ.‌ ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ. 

ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.‌

BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.