ಬ್ರೇಕಿಂಗ್ ನ್ಯೂಸ್
20-11-25 01:42 pm Udupi Correspondent ಕರಾವಳಿ
ಉಡುಪಿ, ನ 20 : ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು.
ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ.
ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ ಪಾತ್ರ ನಿರ್ವಹಿಸಿದ್ದರು. ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೂರು ದಶಕಗಳ ಕಾಲ ಕಲಾಸೇವೆ:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯವರಾದ ಈಶ್ವರ ಗೌಡರು ಶಿವರಾಜಪುರ, ಮೇಗರವಳ್ಳಿ, ಮಡಾಮಕ್ಕಿ, ಅಮೃತೇಶ್ವರಿ, ಮಂದಾರ್ತಿ ಮೇಳಗಳಲ್ಲಿ ಸುಮಾರು ಮೂರು ದಶಕಗಳಿಂದ ಕಲಾಸೇವೆ ಮಾಡುತ್ತಾ ಬಂದಿದ್ದರು. ಪೌರಾಣಿಕ ಪುರುಷ ಪಾತ್ರಗಳನ್ನು ಸಮರ್ಥವಾಗಿ ರಂಗದಲ್ಲಿ ಪ್ರಸ್ತುತಗೊಳಿಸಿ ಕಲಾಸಿದ್ಧಿ ಪಡೆದಿದ್ದರು.
ಅಂತ್ಯಸಂಸ್ಕಾರ ಇಂದು ಶೃಂಗೇರಿ ಸಮೀಪದ ನೆಮ್ಮಾರು ಗ್ರಾಮದ ಬುಕ್ಡಿಬೖಲಿನಲ್ಲಿ ಜರುಗಲಿದೆ. ಮಂದಾರ್ತಿ ಮೇಳದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು ಸಂತಾಪ ಸೂಚಿಸಿದ್ದಾರೆ.
A tragic incident occurred in Udupi district on Wednesday night, where a Yakshagana performer passed away after suffering a heart attack. The deceased has been identified as Ishwara Gowda (51), an artist from the Mandarti Mela. He was performing the role of Mahishasura in the Devi Mahatme episode of the Mandarti Second Mela. Shortly after completing his role and while removing his costume, he suddenly collapsed.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 01:42 pm
Udupi Correspondent
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
20-11-25 11:51 am
Bangalore Correspondent
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm
Bangalore ATM Van Robbery: ಬೆಂಗಳೂರಿನಲ್ಲಿ ಹಾಡಹ...
19-11-25 06:07 pm