ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ್ಟು ಬಂದು ನೇಣಿಗೆ ಶರಣಾದ ಕಡಬದ ಯುವಕ 

20-11-25 10:48 pm       Mangalore Correspondent   ಕರಾವಳಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ. 

ಪುತ್ತೂರು, ನ.20 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ. 

ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿಯ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ  ಚೇತನ್(29) ಮೃತ ಯುವಕ. ತನ್ನ ಮನೆಯಲ್ಲೇ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಚೇತನ್ ಜೀವಾಂತ್ಯ ಮಾಡಿಕೊಂಡಿದ್ದಾರೆ. ಪದವಿ ಮುಗಿಸಿ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಚೇತನ್ ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಈ ಬಗ್ಗೆ ಪುತ್ತೂರಿನ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಬುಧವಾರ  ಶಿಕ್ಷಕಿಯಾಗಿರುವ ತಾಯಿಯನ್ನು ಕಾಲೇಜಿನ ವರೆಗೆ ಬಿಟ್ಟು ಬಂದಿದ್ದ ಚೇತನ್ ಮನೆಗೆ ಬಂದು ಸಾವಿಗೆ ಶರಣಾಗಿದ್ದಾನೆ. 

ತಾಯಿ ಎಂದಿನಂತೆ ಮಧ್ಯಾಹ್ನ ದೂರವಾಣಿ ಕರೆ ಮಾಡಿದಾಗ ಮಗ ಕರೆ ಸ್ವೀಕರಿಸದೆ ಇದ್ದಾಗ ಮನೆಯ ಬಳಿ ಕೆಲಸ ಮಾಡುತ್ತಿದ್ದವರಿಗೆ ಕರೆ ಮಾಡಿದ್ದರು. ಮಗ ಕರೆ ಸ್ವೀಕರಿಸುತ್ತಿಲ್ಲ, ಸ್ವಲ್ಪ ವಿಚಾರಿಸಿ ಎಂದಿದ್ದರು. ಮನೆಯ ಬಳಿ ಬಂದಾಗ ಚಿಲಕ ಹಾಕಿದ್ದು ಕಿಟಕಿಯಿಂದ ನೋಡಿದಾಗ ಚೇತನ್ ಫ್ಯಾನಿಗೆ ನೇಣು ಬಿಗಿದು ನೇತಾಡಿರುವ ಸ್ಥಿತಿಯಲ್ಲಿರುವುದು ಕಂಡಿದೆ. ತಾಯಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

A 29-year-old young man suffering from mental depression died by suicide at his home in Noojibaltila, Kadaba taluk. The deceased has been identified as Chetan, son of D. Walter Rodrigues from Kodankeri in Noojibaltila.