ಬ್ರೇಕಿಂಗ್ ನ್ಯೂಸ್
22-11-25 05:46 pm Mangalore Correspondent ಕರಾವಳಿ
ಮಂಗಳೂರು, ನ.22 : ರಾಜ್ಯ ಕಾಂಗ್ರೆಸಿನಲ್ಲಿ ಸಿಎಂ ಬದಲಾವಣೆಯ ಸುದ್ದಿ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಆಪ್ತ ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸುತ್ತಿದ್ದಾರೆ. ಡಿಕೆಶಿ ಬಣ ದೆಹಲಿಯಲ್ಲಿ ಬೀಡು ಬಿಟ್ಟಿದ್ದರೆ, ಸಿದ್ದರಾಮಯ್ಯ ಬಣ ಬೆಂಗಳೂರಿನಲ್ಲೇ ಮುಂದಿನ ನಡೆ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ನಡುವೆ, ಮಂಗಳೂರಿಗೆ ಬಂದಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಕೋಣಾಜೆ ಮಂಗಳೂರು ವಿವಿ ಆವರಣದಲ್ಲಿ ಡಿ.3ರಂದು ನಡೆಯುವ ಗಾಂಧಿ- ನಾರಾಯಣ ಗುರು ಸಂವಾದ ಶತಾಬ್ದಿ ಕಾರ್ಯಕ್ರಮದ ನಿಮಿತ್ತ ಸುದ್ದಿಗೋಷ್ಟಿ ನಡೆಸಿದ ಹರಿಪ್ರಸಾದ್ ಅವರಲ್ಲಿ ಅಧಿಕಾರ ಹಸ್ತಾಂತರ ಜಟಾಪಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಬರಲಿದ್ದು ಸಮಾವೇಶದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಅಧಿಕಾರ ಹಸ್ತಾಂತರ ಬಗ್ಗೆ ಕೇಳಿದ್ದಕ್ಕೆ, ಆ ಬಗ್ಗೆ ನಮಗೇನೂ ಗೊತ್ತಿಲ್ಲ. ಖರ್ಗೆ ಸಾಹೇಬರು ಬೆಂಗಳೂರಿನಲ್ಲಿ ಇದ್ದಾರೆ. ಅವರಲ್ಲಿ ಕೇಳಿದರೆ ಹೇಳಬಹುದು ಎಂದರು. ರಾಜಕೀಯ ವಿಚಾರ ಮಾತನಾಡಲ್ಲ. ನಾವು ನಾರಾಯಣ ಗುರುಗಳು ಮತ್ತು ಗಾಂಧೀಜಿಯವರು ಜೊತೆಗೂಡಿ ಮಾತುಕತೆ ನಡೆಸಿದ ವಿಚಾರದಲ್ಲಿ ಶತಾಬ್ದಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಪಕ್ಷ ಭೇದ ರಹಿತ ಕಾರ್ಯಕ್ರಮ ಇದಾಗಿದ್ದು ಸ್ವಾಮೀಜಿಗಳು ಸೇರಿದಂತೆ ಎಲ್ಲ ಪಕ್ಷಗಳ ಪ್ರಮುಖರು ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಡಿಕೆ ಶಿವಕುಮಾರ್ ತಮ್ಮ ಪರವಾಗಿರುವ ಶಾಸಕರ ಜೊತೆಗೆ ಮಾತುಕತೆ ನಡೆಸುತ್ತಿದ್ದು, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕಾಗಿ ಜೈಲಿನಲ್ಲಿರುವ ಶಾಸಕರಾದ ವೀರೇಂದ್ರ ಪಪ್ಪಿ, ವಿನಯ ಕುಲಕರ್ಣಿ ಅವರನ್ನೂ ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ಮೂರು ಗಂಟೆ ಕಾಲ ಚರ್ಚಿಸಿದ್ದಾರೆ. ಇದೇ ವೇಳೆ, ಡಿಕೆಶಿ ಪರವಾಗಿರುವ ಕೆಲವು ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.
Senior Congress leader BK Hariprasad clarified in Mangaluru that Chief Minister Siddaramaiah will continue in his position despite ongoing speculation about a leadership change within the Karnataka Congress. He explained that Siddaramaiah will attend the Gandhi–Narayana Guru Centenary Dialogue event at Konaje on December 3 as the Chief Minister and deliver the keynote address.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm