ಬ್ರೇಕಿಂಗ್ ನ್ಯೂಸ್
22-11-25 05:46 pm Mangalore Correspondent ಕರಾವಳಿ
ಮಂಗಳೂರು, ನ.22 : ರಾಜ್ಯ ಕಾಂಗ್ರೆಸಿನಲ್ಲಿ ಸಿಎಂ ಬದಲಾವಣೆಯ ಸುದ್ದಿ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಆಪ್ತ ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸುತ್ತಿದ್ದಾರೆ. ಡಿಕೆಶಿ ಬಣ ದೆಹಲಿಯಲ್ಲಿ ಬೀಡು ಬಿಟ್ಟಿದ್ದರೆ, ಸಿದ್ದರಾಮಯ್ಯ ಬಣ ಬೆಂಗಳೂರಿನಲ್ಲೇ ಮುಂದಿನ ನಡೆ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ನಡುವೆ, ಮಂಗಳೂರಿಗೆ ಬಂದಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಕೋಣಾಜೆ ಮಂಗಳೂರು ವಿವಿ ಆವರಣದಲ್ಲಿ ಡಿ.3ರಂದು ನಡೆಯುವ ಗಾಂಧಿ- ನಾರಾಯಣ ಗುರು ಸಂವಾದ ಶತಾಬ್ದಿ ಕಾರ್ಯಕ್ರಮದ ನಿಮಿತ್ತ ಸುದ್ದಿಗೋಷ್ಟಿ ನಡೆಸಿದ ಹರಿಪ್ರಸಾದ್ ಅವರಲ್ಲಿ ಅಧಿಕಾರ ಹಸ್ತಾಂತರ ಜಟಾಪಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಬರಲಿದ್ದು ಸಮಾವೇಶದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಅಧಿಕಾರ ಹಸ್ತಾಂತರ ಬಗ್ಗೆ ಕೇಳಿದ್ದಕ್ಕೆ, ಆ ಬಗ್ಗೆ ನಮಗೇನೂ ಗೊತ್ತಿಲ್ಲ. ಖರ್ಗೆ ಸಾಹೇಬರು ಬೆಂಗಳೂರಿನಲ್ಲಿ ಇದ್ದಾರೆ. ಅವರಲ್ಲಿ ಕೇಳಿದರೆ ಹೇಳಬಹುದು ಎಂದರು. ರಾಜಕೀಯ ವಿಚಾರ ಮಾತನಾಡಲ್ಲ. ನಾವು ನಾರಾಯಣ ಗುರುಗಳು ಮತ್ತು ಗಾಂಧೀಜಿಯವರು ಜೊತೆಗೂಡಿ ಮಾತುಕತೆ ನಡೆಸಿದ ವಿಚಾರದಲ್ಲಿ ಶತಾಬ್ದಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಪಕ್ಷ ಭೇದ ರಹಿತ ಕಾರ್ಯಕ್ರಮ ಇದಾಗಿದ್ದು ಸ್ವಾಮೀಜಿಗಳು ಸೇರಿದಂತೆ ಎಲ್ಲ ಪಕ್ಷಗಳ ಪ್ರಮುಖರು ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಡಿಕೆ ಶಿವಕುಮಾರ್ ತಮ್ಮ ಪರವಾಗಿರುವ ಶಾಸಕರ ಜೊತೆಗೆ ಮಾತುಕತೆ ನಡೆಸುತ್ತಿದ್ದು, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕಾಗಿ ಜೈಲಿನಲ್ಲಿರುವ ಶಾಸಕರಾದ ವೀರೇಂದ್ರ ಪಪ್ಪಿ, ವಿನಯ ಕುಲಕರ್ಣಿ ಅವರನ್ನೂ ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ಮೂರು ಗಂಟೆ ಕಾಲ ಚರ್ಚಿಸಿದ್ದಾರೆ. ಇದೇ ವೇಳೆ, ಡಿಕೆಶಿ ಪರವಾಗಿರುವ ಕೆಲವು ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.
Senior Congress leader BK Hariprasad clarified in Mangaluru that Chief Minister Siddaramaiah will continue in his position despite ongoing speculation about a leadership change within the Karnataka Congress. He explained that Siddaramaiah will attend the Gandhi–Narayana Guru Centenary Dialogue event at Konaje on December 3 as the Chief Minister and deliver the keynote address.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm