Mangaluru and Puttur: ನ.28ರಂದು ಪ್ರಧಾನಿ ಮೋದಿ ಉಡುಪಿಗೆ ; ರೋಡ್ ಶೋ ರದ್ದು, ಉಡುಪಿ ಕೃಷ್ಣ ದರ್ಶನ ಬಳಿಕ ಗೋವಾಕ್ಕೆ ಪ್ರಯಾಣ 

23-11-25 03:25 pm       Udupi Correspondent   ಕರಾವಳಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದು, ಹೆಲಿಪ್ಯಾಡ್‌, ಕಾಂಕ್ರೀಟ್‌ ರಸ್ತೆ, ಭದ್ರತಾ ವ್ಯವಸ್ಥೆ, ಸೇರಿದವರಿಗೆ ಆಸನ ಸೌಲಭ್ಯ ಸಹಿತ ಸಕಲ ತಯಾರಿ ವೇಗವಾಗಿ ಸಾಗುತ್ತಿದೆ.

ಉಡುಪಿ, ನ.22: ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದು, ಹೆಲಿಪ್ಯಾಡ್‌, ಕಾಂಕ್ರೀಟ್‌ ರಸ್ತೆ, ಭದ್ರತಾ ವ್ಯವಸ್ಥೆ, ಸೇರಿದವರಿಗೆ ಆಸನ ಸೌಲಭ್ಯ ಸಹಿತ ಸಕಲ ತಯಾರಿ ವೇಗವಾಗಿ ಸಾಗುತ್ತಿದೆ.

ನವೆಂಬರ್ 28 ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬೆಳಗ್ಗೆ 11:05 ಕ್ಕೆ ಬರಲಿದ್ದಾರೆ. ಅಲ್ಲಿಂದ ಬೆಳಿಗ್ಗೆ 11:10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ. 

ಈ ಹಿಂದೆ ಪ್ರಧಾನಿಯವರ ಸ್ವಾಗತಕ್ಕಾಗಿ ರೋಡ್ ಶೋ ನಡೆಸಲು ಯೋಜಿಸಲಾಗಿತ್ತು. ಆದರೆ, ಪರಿಷ್ಕೃತ ಪಟ್ಟಿಯಲ್ಲಿ ರೋಡ್ ಶೋ ರದ್ದುಗೊಳಿಸಲಾಗಿದೆ. ಹೆಲಿಪ್ಯಾಡ್‌ನಿಂದ ನೇರವಾಗಿ ಮಧ್ಯಾಹ್ನ 12 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿರುವ ಮೋದಿ, ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ. ತದನಂತರ ಐತಿಹಾಸಿಕ 'ಲಕ್ಷ ಕಂಠ ಗೀತ ಗಾಯನ' ಕಾರ್ಯಕ್ರಮದಲ್ಲಿ ಭಾಗವಹಿಸಿ, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ರಾಷ್ಟ್ರೀಯ ಹೆದ್ದಾರಿಯ 169(ಎ) ಆದಿ ಉಡುಪಿ ಕರಾವಳಿ ಬೈಪಾಸ್‌ ಮಧ್ಯೆ 400 ಮೀ. ಕಾಂಕ್ರೀಟ್‌ ಕಾಮಗಾರಿ ಭರದಿಂದ ಸಾಗುತ್ತಿದೆ. ಈ ರಸ್ತೆ ಪ್ರಧಾನಿ ವಾಹನ ಸಂಚಾರಕ್ಕೆ ಸೀಮಿತವಾಗಿರಲಿದೆ. ಆದಿ ಉಡುಪಿಯ ಎಪಿಎಂಸಿ ಎದುರಿಗೆ ಈಗಾಗಲೇ ಇರುವ ಮೂರು ಹೆಲಿಪ್ಯಾಡ್‌ಗಳ ದುರಸ್ತಿ, ಸಂಪರ್ಕ ರಸ್ತೆ, ಮಾರ್ಕಿಂಗ್‌ ಪ್ರಗತಿಯಲ್ಲಿದೆ. ಪಕ್ಕದಲ್ಲೇ ನಾಲ್ಕನೇ ಹೆಲಿಪ್ಯಾಡ್‌ ನಿರ್ಮಾಣ ಲೋಕೋಪಯೋಗಿ ಇಲಾಖೆಯಿಂದ 67 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿದೆ.

ಉಡುಪಿ ನಂತರ ಗೋವಾಕ್ಕೆ ಭೇಟಿ

ಉಡುಪಿಯ ಕಾರ್ಯಕ್ರಮ ಮುಗಿಸಿದ ಬಳಿಕ, ಮಧ್ಯಾಹ್ನ 1:35ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ನಿಂದ ಹೊರಟು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 2 ಗಂಟೆಗೆ ಗೋವಾಗೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಧಾನಿಗಳ ಭೇಟಿ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ.

Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.