ಬ್ರೇಕಿಂಗ್ ನ್ಯೂಸ್
24-11-25 08:41 pm Mangalore Correspondent ಕರಾವಳಿ
ಪುತ್ತೂರು, ನ.24 : ಪುತ್ತಿಲ ಪರಿವಾರ ಮತ್ತು ಬಿಜೆಪಿ ಮಧ್ಯೆ ಮತ್ತೆ ಅಸಮಾಧಾನ ಸ್ಪೋಟಗೊಂಡಿದೆ. ಪಕ್ಷದಲ್ಲಿ ಪ್ರಮುಖ ಜವಾಬ್ದಾರಿ ಕೊಡಬೇಕೆಂದು ರಾಜ್ಯ ಮುಖಂಡರು ಸೂಚಿಸಿದ್ದರು. ಆದರೆ ಯಾಕೆ ಕೊಟ್ಟಿಲ್ಲ ಅನ್ನೋದನ್ನು ಬಿಜೆಪಿ ಜಿಲ್ಲಾಧ್ಯಕ್ಷರೇ ಸ್ಪಷ್ಟಪಡಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗೋಷ್ಟಿ ವೇಳೆ ಮಾತನಾಡಿದ ಅವರು, ನನಗೆ ಪಕ್ಷದ ಜವಾಬ್ದಾರಿ ಕೊಡಬೇಕೆಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸೂಚಿಸಲಾಗಿತ್ತು. ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ನಾನು ಇರುವಾಗಲೇ ಪಕ್ಷದ ಹಿರಿಯರು ಸೂಚಿಸಿದ್ದರು. ಯಾವ ಜವಾಬ್ದಾರಿ ಮತ್ತು ಯಾಕೆ ಕೊಟ್ಟಿಲ್ಲ ಅನ್ನೋದನ್ನ ಬಿಜೆಪಿ ಜಿಲ್ಲಾಧ್ಯಕ್ಷರು ಸ್ಪಷ್ಟಪಡಿಸಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ಹೇಳಿದರು. ಪಕ್ಷದಲ್ಲಿ ತನಗೆ ಜವಾಬ್ದಾರಿ ನೀಡಬೇಕೆಂದು ನಾನು ಕೇಳಿಲ್ಲ. ಕಾರ್ಯಕರ್ತರ ಭಾವನೆ ಆ ರೀತಿ ಇರಬಹುದು. ಅಸಮಾಧಾನವೂ ಇರಬಹುದು. ಹಾಗಂತ, ನಾನು ಈ ಬಗ್ಗೆ ಪಕ್ಷದಲ್ಲಿ ಪ್ರಶ್ನೆ ಮಾಡಿಲ್ಲ ಎಂದರು.
ಈಗಲೂ ಪುತ್ತೂರಿನಲ್ಲಿ ನಗರ ಮತ್ತು ಗ್ರಾಮಾಂತರ ಮಂಡಲಗಳನ್ನು ಜೋಡಿಸಿ ಜವಾಬ್ದಾರಿ ಕೊಟ್ಟಲ್ಲಿ ನಾಳೆಯೇ ಜವಾಬ್ದಾರಿ ತೆಗೆದುಕೊಳ್ಳುವೆ ಮತ್ತು ಪಕ್ಷವನ್ನು ಗೆಲ್ಲಿಸುವ ಕೆಲಸ ಮಾಡುತ್ತೇನೆ. ಯಾರು ಅಭ್ಯರ್ಥಿ ಎನ್ನುವ ವಿಚಾರ ಬದಿಗಿಟ್ಟು ಪಕ್ಷವನ್ನು ಗೆಲ್ಲಿಸುತ್ತೇನೆ ಎಂದು ಅರುಣ್ ಪುತ್ತಿಲ ಹೇಳಿದ್ದಾರೆ.
ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ನನಗೆ ಅಮಿತ್ ಶಾ ಕರೆ ಮಾಡಿದ್ದರು ಎಂದು ಸುದ್ದಿ ಹಬ್ಬಿಸಿದ್ದರು. ಆದರೆ ನನಗೆ ಅಮಿತ್ ಶಾ ಕರೆ ಮಾಡಿಲ್ಲ. ಪಕ್ಷದ ಕಾರ್ಯಕರ್ತರ ಭಾವನೆಗೆ ಬೆಲೆ ಕೊಟ್ಟು ಸ್ಪರ್ಧಿಸಿದ್ದೆ ಎಂದು ಹೇಳಿದ ಅವರು, ಆನಂತರ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದವರಿಗೆ ಪಕ್ಷ ಜವಾಬ್ದಾರಿ ನೀಡಿದೆ. ಆ ಸಂದರ್ಭದಲ್ಲಿ ನನಗೆ ಜವಾಬ್ದಾರಿ ಬೇಡ, ಕಾರ್ಯಕರ್ತರಿಗೆ ನೀಡುವಂತೆ ನಾನೇ ಹೇಳಿದ್ದೆ. ಆದರೆ ಕಾರ್ಯಕರ್ತರಿಗೆ ನನಗೆ ಜವಾಬ್ದಾರಿ ನೀಡದಿರುವುದು ಬೇಸರ ತಂದಿದೆ.
ಈಗಲೂ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲ ಒಟ್ಟು ಮಾಡಿ ಜವಾಬ್ದಾರಿ ನೀಡಿದರೆ ಪಕ್ಷ ಸಂಘಟನೆ ಮಾಡಲು ಬದ್ಧ. ಪುತ್ತೂರಿನಲ್ಲಿ ಮತ್ತೆ ಬಿಜೆಪಿಯನ್ನು ಗೆಲ್ಲಿಸುತ್ತೇವೆ, ಚುನಾವಣೆಗೆ ಯಾರು ನಿಂತರೂ ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇನೆ. ಆದರೆ ಕಾರ್ಯಕರ್ತರ ಒಲವು ಯಾರ ಮೇಲಿದೆಯೋ ಅಂತಹ ಅಭ್ಯರ್ಥಿ ಪುತ್ತೂರಿಗೆ ಬೇಕು ಎಂದರು. ಕಾರ್ಯಕರ್ತರ ನಿಲುವಿಗೆ ನಾನು ಎಂದಿಗೂ ಬದ್ದ ಎಂದು ಅರುಣ್ ಪುತ್ತಿಲ ಹೇಳಿದ್ದಾರೆ.
Tensions have resurfaced between the Puthila family and the BJP once again. Arun Kumar Puthila has stated that senior leaders had instructed that he be given a key responsibility within the party, but the district president must clarify why it was not given.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm