ಬ್ರೇಕಿಂಗ್ ನ್ಯೂಸ್
29-12-20 03:13 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಜನವರಿ 1ರಂದು ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣ ಬಳಿ ಅಬ್ಬಕ್ಕ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬ್ಯಾರಿ ಭವನ ನಿರ್ಮಾಣ ಮಾಡಲು ಶಿಲಾನ್ಯಾಸ ಕಾರ್ಯಕ್ರಮ ನಿಗದಿಯಾಗಿದ್ದು, ಬ್ಯಾರಿ ಭವನದ ಶಿಲಾನ್ಯಾಸ ವಿರೋಧಿಸಿ ವಿವಿಧ ಸಂಘಟನೆಗಳು ಸೇರಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ಉಳ್ಳಾಲ, ಅಖಿಲ ಭಾರತ ಹಿಂದು ಮಹಾಸಭಾ, ತುಳುನಾಡ ಜವನೆರ್ (ರಿ) ಕುಡ್ಲ ಸಂಘಟನೆಗಳು ಬ್ಯಾರಿ ಭವನ ಶಿಲಾನ್ಯಾಸಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಈ ಬಗ್ಗೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ. ತೊಕ್ಕೊಟ್ಟಿನ ಕೇಂದ್ರ ಬಸ್ಸು ತಂಗುದಾಣದ ಹತ್ತಿರದ 41 ಸೆಂಟ್ಸ್ ಜಮೀನನನ್ನು ಅಬ್ಬಕ್ಕ ಭವನಕ್ಕೆ ಮಂಜೂರುಗೊಳಿಸಿದ್ದು ಭವನ ನಿರ್ಮಾಣಕ್ಕೆ ಶಿಲಾನ್ಯಾಸವಾಗಿ 9 ವರ್ಷಗಳು ಸಂದರೂ ಕಟ್ಟಡ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ. ಈ ನಡುವೆ, ನೀರು ಮಾರ್ಗದ ಬೈತುರ್ಲಿಯಲ್ಲಿ ನಿರ್ಮಿಸಲು ತಯಾರಿ ನಡೆಸಿದ್ದ ಬ್ಯಾರಿ ಭವನವನ್ನು ತರಾತುರಿಯಲ್ಲಿ ತೊಕ್ಕೊಟ್ಟಿಗೆ ವರ್ಗಾಯಿಸಿದ್ದಾರೆ. ಸ್ಥಳೀಯ ಶಾಸಕ ಯು.ಟಿ .ಖಾದರ್, ಬ್ಯಾರಿ ಭವನಕ್ಕೆ ಅಬ್ಬಕ್ಕ ಭವನದ ಕಾಯ್ದಿರಿಸಿದ ಜಾಗವನ್ನೇ ನೀಡಲಾಗಿದೆ ಎಂಬ ಹೇಳಿಕೆ ನೀಡಿದ್ದು ಗೊಂದಲಕ್ಕೆ ಕಾರಣವಾಗಿದೆ. ಮಾಹಿತಿ ಪ್ರಕಾರ ಬ್ಯಾರಿ ಭವನಕ್ಕೆ ಪಕ್ಕದ ಕಂದಾಯ ಇಲಾಖೆಯ ವಸತಿ ಸಂಕೀರ್ಣಕ್ಕೆ ಮೀಸಲಿಟ್ಟ ಜಾಗವನ್ನು ನೀಡುತ್ತಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದಿದ್ದಾರೆ.

ಬ್ಯಾರಿ ಭವನ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅಬ್ಬಕ್ಕ ಭವನದ ಹತ್ತಿರವೇ ನಿರ್ಮಿಸುವ ಔಚಿತ್ಯವೇನೆಂದು ಪ್ರಶ್ನಿಸಿದ್ದಾರೆ. ಬ್ಯಾರಿ ಭವನ ನಿರ್ಮಿಸಲು ಉಳ್ಳಾಲದಲ್ಲಿ ಮುಸ್ಲಿಂ ಬಾಹುಳ್ಯವುಳ್ಳ ಅನೇಕ ಸ್ಥಳಗಳಿವೆ. ಅಬ್ಬಕ್ಕ ಭವನದ ನಿರ್ಮಾಣ ವಿಳಂಬ, ಅಬ್ಬಕ್ಕ ಅಧ್ಯಯನ ಪೀಠ ಸ್ಥಾಪನೆಯ ಬಗ್ಗೆ ನಾವು ಈ ಹಿಂದೆಯೇ ಪ್ರತಿಭಟನೆ ನಡೆಸುವ ಬಗ್ಗೆ ಹೇಳಿದ್ದೆವು. ಹಾಗಾಗಿ ನಾವು ಜನವರಿ ಒಂದರಂದು ಅಬ್ಬಕ್ಕ ಭವನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಬೆಳಗ್ಗೆ ಮೌನ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.
ಹಿಂದೂ ಪರ ಸಂಘಟನೆಗಳಾದ ಅಖಿಲ ಭಾರತ ಹಿಂದೂ ಮಹಾಸಭಾ, ತುಳುನಾಡ ಜವನೆರ್ (ರಿ)ಕುಡ್ಲದ ಪದಾಧಿಕಾರಿಗಳು ಬ್ಯಾರಿ ಭವನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಬ್ಯಾರಿ ಭವನಕ್ಕೆ ಅನುಮತಿ ನೀಡಿದರೆ ಮುಂದೆ ಅಹಿತಕರ ಘಟನೆಗಳಿಗೆ ವೇದಿಕೆ ನೀಡಿದಂತಾಗುತ್ತದೆ ಎಂದಿದ್ದಾರೆ.
Abbakka followers entirety construct Beary Bhavan in Thokottu Mangalore. Abbakka followers warn of protest if Beary Bhavana is built in Thokottu.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm