ಬ್ರೇಕಿಂಗ್ ನ್ಯೂಸ್
30-11-25 06:03 pm Udupi Correspondent ಕರಾವಳಿ
ಉಡುಪಿ, ನ.30: ಕಾಪು ಠಾಣೆ ವ್ಯಾಪ್ತಿಯ ಪಾಂಗಾಳ ಬ್ರಿಜ್ ಬಳಿಯ ಕೋತ್ತಲ್ ಕಟ್ಟೆ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು ಡೆಕೋರೇಶನ್ ಸಲಕರಣೆಗಳನ್ನು ಟಾಟಾ 407 ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಐದು ಮಂದಿ ಮೃತಪಟ್ಟಿದ್ದಾರೆ.
ಕಾಪು ಜಂಕ್ಷನ್ ಕಡೆಯಿಂದ ಕಾರ್ಮಿಕರು ಮತ್ತು ಡೆಕೋರೇಶನ್ ಸಲಕರಣೆಗಳನ್ನು ಹೊತ್ತುಕೊಂಡು ಟೆಂಪೋ ಅಂಬಲಪಾಡಿಯತ್ತ ತೆರಳುತ್ತಿತ್ತು. ಪಾಂಗಾಳ ಬಳಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಎಡಭಾಗದ ಸರ್ವಿಸ್ ರಸ್ತೆಯ ಕಡೆಗೆ ಅತಿ ವೇಗದಿಂದ ಧಾವಿಸಿದ್ದು ಡಿವೈಡರ್ ದಾಟಿ ಪಲ್ಟಿಯಾಗಿ ಬಿದ್ದಿದೆ.











ಓಪನ್ ಟೆಂಪೋದಲ್ಲಿ ಸರಳು ಇನ್ನಿತರ ಸರಂಜಾಮುಗಳ ಮೇಲ್ಗಡೆ ಉತ್ತರ ಭಾರತ ಮೂಲದ ಕಾರ್ಮಿಕರು ಕುಳಿತುಕೊಂಡಿದ್ದರು. ಟೆಂಪೋ ಪಲ್ಟಿಯಾಗಿದ್ದರಿಂದ ಅವರ ಮೇಲ್ಗಡೆಯೇ ಟೆಂಪೋ ಬಿದ್ದಿದೆ. ಅಲ್ಲದೆ, ಚಾಲಕ ಮತ್ತು ಎದುರುಗಡೆಯೂ ಹಲವರಿದ್ದರು. ಒಟ್ಟು 12 ಜನ ಟೆಂಪೋದಲ್ಲಿದ್ದರು ಎನ್ನಲಾಗುತ್ತಿದ್ದು 4 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಒಟ್ಟು 5 ಮಂದಿ ಮೃತಪಟ್ಟಿದ್ದಾರೆಂಬ ಮಾಹಿತಿ ಇದೆ. ಎಲ್ಲರನ್ನೂ ಉಡುಪಿ ತಾಲೂಕು ಆಸ್ಪತ್ರೆಗೆ ತರಲಾಗಿದೆ.
ಮೃತರಲ್ಲಿ ಉತ್ತರ ಪ್ರದೇಶ, ಬಿಹಾರದವರು ಎಂಬ ಮಾಹಿತಿಗಳಿದ್ದು ಹೆಸರು ಗೊತ್ತಾಗಿಲ್ಲ. ಸ್ಥಳಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಅಂಜತ್ ಅಲಿ, ಕಾಪು ಎಸ್ಐ ತೇಜಸ್ವಿ ಬಂದಿದ್ದು ಸರ್ವಿಸ್ ರಸ್ತೆಗೆ ಬಿದ್ದಿದ್ದ ವಾಹನವನ್ನು ತೆರವು ಮಾಡುವಲ್ಲಿ ವ್ಯಸ್ತರಾಗಿದ್ದಾರೆ. ಮಧ್ಯಾಹ್ನ 3.20 ಗಂಟೆಗೆ ಅಪಘಾತ ನಡೆದಿದೆ. ಉಡುಪಿ ಅಂಬಲಪಾಡಿ ಗಾರ್ಡನ್ ನಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಡೆಕೋರೇಶನ್ ಸಲಕರಣೆ ಗಳನ್ನು ಟೆಂಪೋದಲ್ಲಿ ಒಯ್ಯುತ್ತಿದ್ದರು. ರಾತ್ರಿ ಕೆಲಸ ಆಗಬೇಕಿದ್ದರಿಂದ ರಾತ್ರಿ ಕಾರ್ಮಿಕರ ಊಟಕ್ಕೆಂದು ಅನ್ನ, ಸಾಂಬಾರನ್ನು ಒಯ್ಯುತ್ತಿದ್ದರು. ಎಲ್ಲವೂ ರಸ್ತೆಗೆ ಬಿದ್ದಿದೆ. ಟೆಂಪೋ ಹಳೆಯದಾಗಿದ್ದು ಒಂದು ಟಯರ್ ಅಂತೂ ಪೂರ್ತಿ ಸವೆದಿತ್ತು. ಅತಿ ವೇಗದಲ್ಲಿದ್ದಾಗ ಬ್ರೇಕ್ ಸಿಗದೆ ಪಲ್ಟಿಯಾಗಿದೆ.
A horrific accident on the National Highway near Kothal Katte, Pangala, in the Kapu police limits claimed the lives of five people, after a Tata 407 tempo carrying decoration materials and labourers overturned on Thursday afternoon.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm