ಬ್ರೇಕಿಂಗ್ ನ್ಯೂಸ್
03-12-25 07:23 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅವಶ್ಯಕತೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿ ಭಾಗದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕರಾವಳಿ ಭಾಗದ ಜನರಿಗೆ ಕ್ಷಿಪ್ರಗತಿಯಲ್ಲಿ ನ್ಯಾಯ ದೊರೆಯುವಂತಾಗಲು ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ಮನವಿ ಮಾಡಿದರು.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚೆ ನಡೆಸುತ್ತೇನೆ. ಅವರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್.ವಿ, ಪ್ರಧಾನ ಸರಕಾರಿ ಅಭಿಯೋಜಕ ಎಂ.ಪಿ ನರೋನ್ಹ, ಟಿ.ಎನ್ ಪೂಜಾರಿ, ಎಂ.ಆರ್ ಬಲ್ಲಾಳ್, ಎಂ. ಯಶವಂತ ಮರೋಳಿ, ಮಂಗಳೂರು ವಕೀಲರ ಸಂಘದ ಉಪಾಧ್ಯಕ್ಷ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಜೊತೆ ಕಾರ್ಯದರ್ಶಿ ಶ್ರೀಮತಿ ಜ್ಯೋತಿ, ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಡಿಕೋಸ್ಟ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ ರೈ, ಮೂಡುಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಸುಮನಾ ಶರಣ್, ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು.
Chief Minister Siddaramaiah has assured that the demand for establishing a mobile High Court bench in Mangaluru will be taken up seriously and discussed with the Chief Justice of the Karnataka High Court.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 07:23 pm
Mangalore Correspondent
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
ಕ್ರಿಸ್ಮಸ್ ವೇಳೆಗೆ ಮಂಗಳೂರು- ಮುಂಬೈ ನಡುವೆ ವಾರದ ಎಲ...
01-12-25 03:08 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm