ಬ್ರೇಕಿಂಗ್ ನ್ಯೂಸ್
03-12-25 10:35 pm Mangalore Correspondent ಕರಾವಳಿ
ಮಂಗಳೂರು, ಡಿ.3 : ಔಪಚಾರಿಕವಾಗಿ ಆಹ್ವಾನ ನೀಡದ ಹೊರತು ನವದೆಹಲಿಗೆ ತೆರಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ನವದೆಹಲಿಗೆ ತೆರಳಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಿದ್ದರಾಮಯ್ಯ ಮೇಲಿನಂತೆ ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ವದಂತಿ ಹರಡಿರುವ ಮಧ್ಯೆಯೇ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿದ್ದರು. ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದರೂ, ಡಿಸಿಎಂ ಮತ್ತೆ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.
ಅತ್ತ ಡಿಸಿಎಂ ದೆಹಲಿಗೆ ತೆರಳಿದರೆ, ಸಿದ್ದರಾಮಯ್ಯ ಅವರು ನಾರಾಯಣ ಗುರುಗಳು ಮಹಾತ್ಮ ಗಾಂಧಿಯವರೊಂದಿಗೆ ಭೇಟಿಯಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದರು. ಕಾರ್ಯಕ್ರಮ ಬಳಿಕ ಕಾವೇರಿ ಅತಿಥಿ ಗೃಹಕ್ಕೆ ತೆರಳುವ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಡಿಸಿಎಂ ಯಾರದ್ದೋ ಆಹ್ವಾನದ ಮೇರೆಗೆ ಹೋಗಿರಬಹುದು. ನಾನು ಆಹ್ವಾನ ಇಲ್ಲದೆ ದೆಹಲಿಗೆ ತೆರಳಲ್ಲ ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಜೊತೆಗೆ ಚರ್ಚೆ ನಡೆಸಿದ್ದೀರಾ ಎಂಬ ಪ್ರಶ್ನೆಗೆ, ರಾಜಕೀಯದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದರು.
ಶಿವಕುಮಾರ್ ದೆಹಲಿಗೆ ಹೋಗುತ್ತಿದ್ದಾರೆ ಎಂದು ವರದಿಗಾರರು ಗಮನಸೆಳೆದಾಗ, 'ಅವರನ್ನು ಹೋಗಲು ಬಿಡಿ. ಯಾರಾದರೂ ಅವರಿಗೆ ಬೇಡ ಎಂದು ಹೇಳಿದ್ದಾರೆಯೇ? ಎಂದರು. ನೀವು ಹೋಗುವಿರೇ ಎಂದು ಕೇಳಿದಾಗ, 'ನನಗೆ ಆಹ್ವಾನ ಬಂದಾಗ ಮಾತ್ರ ನಾನು ಹೋಗುತ್ತೇನೆ. ನನಗೆ ಆಹ್ವಾನ ಬಂದಿಲ್ಲ, ಆದ್ದರಿಂದ ನಾನು ಹೋಗುತ್ತಿಲ್ಲ' ಎಂದರು. ದೆಹಲಿಯಲ್ಲಿ ಸಭೆ ನಡೆಸಲು ಪಕ್ಷದ ಹೈಕಮಾಂಡ್ನಿಂದ ಯಾವುದೇ ನಿರ್ದೇಶನವಿದ್ದರೆ, ಅದನ್ನು ವೇಣುಗೋಪಾಲ್ ಮೂಲಕ ತಿಳಿಸಲಾಗುವುದು ಎಂದು ಅವರು ಹೇಳಿದರು.
Karnataka Chief Minister Siddaramaiah stated that he will not travel to New Delhi without a formal invitation from the party high command. His remarks came after Deputy Chief Minister D.K. Shivakumar left for Delhi, sparking fresh curiosity amid ongoing rumours of a possible leadership change in the state.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am