ಬ್ರೇಕಿಂಗ್ ನ್ಯೂಸ್
05-12-25 12:24 pm Mangalore Correspondent ಕರಾವಳಿ
ಮಂಗಳೂರು, ಡಿ.5 : ಕಾಂತಾರ -1 ಚಿತ್ರದ ಯಶಸ್ಸಿನ ಬೆನ್ನಲ್ಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಚಿತ್ರತಂಡ ಮಂಗಳೂರಿನ ಕದ್ರಿ ಬಾರೆಬೈಲಿನ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ಹರಕೆ ನೇಮ ಅರ್ಪಿಸಿದೆ. ನಿನ್ನೆ ರಾತ್ರಿಯಿಡೀ ಇಡೀ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದು ಪಂಜುರ್ಲಿ ದೈವದ ನೇಮವನ್ನು ವೀಕ್ಷಿಸಿದ್ದಾರೆ.
ಕಾಂತಾರ ಚಿತ್ರದ ಎರಡನೇ ಭಾಗದ ಚಿತ್ರೀಕರಣ ಸಂದರ್ಭದಲ್ಲಿ ಬಹಳಷ್ಟು ಎಡವಟ್ಟು ಮತ್ತು ಕಷ್ಟದ ಸನ್ನಿವೇಶಗಳನ್ನು ಚಿತ್ರತಂಡ ಎದುರಿಸಿತ್ತು. ಈ ವೇಳೆ, ವಾರಾಹಿ ಪಂಜುರ್ಲಿ ದೈವದ ಉತ್ಸವದ ಸಂದರ್ಭದಲ್ಲಿ ಬಂದಿದ್ದ ರಿಷಬ್ ಶೆಟ್ಟಿ ದಂಪತಿ, ಚಿತ್ರೀಕರಣಕ್ಕೆ ತೊಂದರೆಯಾಗದಂತೆ ಕೇಳಿಕೊಂಡಿದ್ದರು. ಆನಂತರ, ಕಳೆದ ಎಪ್ರಿಲ್ ತಿಂಗಳಲ್ಲಿ ಬಾರೆಬೈಲ್ ದೈವಸ್ಥಾನದಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿದ್ದಾಗ ಆಗಮಿಸಿದ್ದ ರಿಷಬ್ ಶೆಟ್ಟಿ, ಚಿತ್ರೀಕರಣ ಪೂರ್ತಿಯಾಗಿದ್ದಾಗಿ ಹೇಳಿದ್ದಲ್ಲದೆ, ಹರಕೆ ನೇಮ ಅರ್ಪಿಸುವ ಬಗ್ಗೆಯೂ ಹೇಳಿಕೊಂಡಿದ್ದರು.





ಅದೇ ಸಂದರ್ಭದಲ್ಲಿ ನಿನ್ನ ಸಿನಿಮಾ ಲೋಕದಲ್ಲಿಯೇ ನಿನಗೆ ಸಾಕಷ್ಟು ಶತ್ರುಗಳಿದ್ದಾರೆ, ಇದಕ್ಕಾಗಿ ಜಾಗ್ರತೆ, ಎಚ್ಚರಿಕೆಯಲ್ಲಿ ಇರುವಂತೆ ದೈವ ಪಂಜುರ್ಲಿ ಎಚ್ಚರಿಕೆ ನುಡಿಯಾಡಿತ್ತು. ಕಾಂತಾರ ಚಿತ್ರೀಕರಣ ಸಂದರ್ಭ ಬಹಳಷ್ಟು ಬಾರಿ ರಿಷಬ್ ಶೆಟ್ಟಿಗೂ ಜೀವಕ್ಕೆ ಹಾನಿಯಾಗುವ ಸನ್ನಿವೇಶ ಎದುರಾಗಿತ್ತು. ಅಲ್ಲದೆ, ಎರಡು ಕಡೆ ಅಪಘಾತ, ಮತ್ತೊಬ್ಬ ಕಲಾವಿದರ ಜೀವ ಹೋಗಿದ್ದ ಸ್ಥಿತಿಯೂ ಆಗಿತ್ತು. ಇವೆಲ್ಲದರ ಬಳಿಕ ಕಳೆದ ಅಕ್ಟೋಬರ್ ನಲ್ಲಿ ಚಿತ್ರ ತೆರೆಗೆ ಬಂದು ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಕಲೆಕ್ಷನ್ ನಲ್ಲಿಯೂ ಅತಿ ಹೆಚ್ಚು ಗಳಿಕೆಯ ಕನ್ನಡ ಚಿತ್ರವಾಗಿ ಮೂಡಿಬಂದಿತ್ತು.
ಇದೀಗ ದೈವಾರಾಧನೆಯ ಸೀಸನ್ ಆರಂಭದಲ್ಲಿಯೇ ಕದ್ರಿ ಬಾರೆಬೈಲಿನ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಿನ್ನೆ ರಾತ್ರಿ ಹೊಂಬಾಳೆ ಫಿಲಂಸ್ ತಂಡದ ವತಿಯಿಂದ ಹರಕ ನೇಮ ನಡೆಸಲಾಗಿದೆ. ರಿಷಬ್ ಶೆಟ್ಟಿ ಪತ್ನಿ, ಮಕ್ಕಳು ಸೇರಿದಂತೆ ನಿರ್ಮಾಪಕ ವಿಜಯ ಕಿರಗಂದೂರು, ನಿರ್ದೇಶಕ ಆನಂದರಾಮ್ ಸೇರಿದಂತೆ ಚಿತ್ರ ತಂಡದ ಹೆಚ್ಚಿನ ಸದಸ್ಯರು ಪಾಲ್ಗೊಂಡಿದ್ದರು. ಕಾಂತಾರ ಮೊದಲ ಚಿತ್ರದ ಬಳಿಕವೂ ರಿಷಬ್ ಶೆಟ್ಟಿ ಇದೇ ದೈವಸ್ಥಾನದಲ್ಲಿ ಹರಕೆ ನೇಮ ಕೊಟ್ಟಿದ್ದರು.
Following the massive success of Kantara-1, actor-director Rishab Shetty, along with his family and the Hombale Films team, offered harake at the Varahi Panjurli Daivasthana in Kadri Barebail, Mangaluru. The entire film crew was present through the night to witness the daiva nema rituals.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am