ಬ್ರೇಕಿಂಗ್ ನ್ಯೂಸ್
06-12-25 06:12 pm Mangalore Correspondent ಕರಾವಳಿ
ಪುತ್ತೂರು, ಡಿ.6 : ತಡರಾತ್ರಿ ವೇಳೆ ಅಕ್ರಮವಾಗಿ ಮನೆಯೊಂದಕ್ಕೆ ನುಗ್ಗಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಸದ್ರಿ ವ್ಯಕ್ತಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ದೂರಿನಂತೆ, ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯ ಸಮೀಪದ ಸಹೋದರ ಹರೀಶ ಗೌಡರ ಮನೆಗೆ ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಈ ವೇಳೆ ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದರು. ಆದರೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ.
ಈ ವೇಳೆ ವ್ಯಕ್ತಿಯನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ ಎಂಬುದಾಗಿ ತಿಳಿದು ಬಂದಿತ್ತು. ರಾಜು ನಾಯ್ಕ ತಡರಾತ್ರಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆರೋಪಿ ರಾಜು ನಾಯ್ಕ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಕ್ಷಣದಿಂದಲೇ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
A head constable from the Kadaba Police Station, Raju Naik, was arrested after he allegedly illegally entered a house late at night and assaulted a family member. The incident took place in Koyila, Kadaba taluk.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm