ಬ್ರೇಕಿಂಗ್ ನ್ಯೂಸ್
07-12-25 03:02 pm Mangalore Correspondent ಕರಾವಳಿ
ಮಂಗಳೂರು, ಡಿ.7 : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಳಿಕ ದೆಹಲಿ ಆರ್ಥಿಕ ಅಪರಾಧ ಪೊಲೀಸರು ಡಿಕೆಶಿ ಆಪ್ತ ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಆಲಿ ಅವರಿಗೂ ನೊಟೀಸ್ ಜಾರಿ ಮಾಡಿದ್ದಾರೆ.
ಕೆಪಿಸಿಸಿ ಸೆಕ್ರೆಟರಿ ಆಗಿರುವ ಇನಾಯತ್ ಆಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ತನಿಖೆಗೆ ಹಾಜರಾಗುವಂತೆ ನೊಟೀಸ್ ಜಾರಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೀಡಿರುವ ದೂರಿನ ಮೇರೆಗೆ ದಿಲ್ಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್ಐಆರ್ ದಾಖಲಿಸಿತ್ತು. ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಸೋದರ ಡಿಕೆ ಸುರೇಶ್ ಗೆ ನೊಟೀಸ್ ಜಾರಿಯಾಗಿತ್ತು.
ಸದ್ಯ ಡಿಕೆಶಿ ಜೊತೆಗೆ ವ್ಯವಹಾರ ಪಾಲುದಾರಿಕೆ ಹೊಂದಿರುವ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದದೊಳಗೆ ತನಿಖೆಗೆ ಹಾಜರಾಗುವಂತೆ ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ನೋಟಿಸ್ ನೀಡಿ ಹೋಗಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಇನಾಯತ್ ಅಲಿ ತನಿಖೆಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ದೆಹಲಿ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ತನಿಖೆಗೆ ಕರೆದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ಇನಾಯತ್ ಅಲಿ ಕೂಡಾ ಆರ್ಥಿಕ ಸಹಾಯ ಒದಗಿಸಿದ್ದರು ಎಂಬ ಮಾಹಿತಿ ಇದ್ದು ಈಗ ಸಂಕಷ್ಟ ಎದುರಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸಿನಿಂದ ಸ್ಪರ್ಧಿಸಿ ಇನಾಯತ್ ಆಲಿ ಪರಾಜಿತರಾಗಿದ್ದರು. ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದೊಂದಿಗಿನ ಸಂಬಂಧ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ನೀಡಿದ ದೇಣಿಗೆ ಬಗ್ಗೆ ಪ್ರಮಾಣಪತ್ರ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಯಾವ ರೀತಿಯಲ್ಲಿ ದೇಣಿಗೆ ಕೊಡಲಾಗಿದೆ ಮತ್ತು ಈ ಹಣ ಯಾವುದಕ್ಕೆ ಬಳಕೆಯಾಗಿದೆ ಎಂಬುದು ಗೊತ್ತಿದೆಯೇ ಎಂಬ ವಿವರಗಳನ್ನು ಕೇಳಿ ನೊಟೀಸ್ ನೀಡಿದ್ದಾರೆ.
In the ongoing National Herald case, the Delhi Police’s Economic Offences Wing (EOW) has now issued a notice to Inayat Ali, a close associate of Karnataka Deputy Chief Minister DK Shivakumar and KPCC Secretary. The notice was personally delivered to Ali at his Mangaluru residence, directing him to appear before investigators within a week.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm