ಬ್ರೇಕಿಂಗ್ ನ್ಯೂಸ್
07-12-25 10:45 pm Udupi Correspondent ಕರಾವಳಿ
ಉಡುಪಿ, ಡಿ.7 : ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಭೇಟಿ ನೀಡಿದ್ದು ಇತ್ತೀಚೆಗೆ ಚಿನ್ನ ಲೇಪಿತವಾದ ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.
ಪರ್ಯಾಯ ಪುತ್ತಿಗೆ ಮಠದ ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿರುವ ಪವನ್ ಕಲ್ಯಾಣ್ ಅವರನ್ನು ಪರ್ಯಾಯ ಪುತ್ತಿಗೆ ಮಠದಿಂದ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಅವರು ಕನಕನ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಅನಂತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.



ಮಠದ ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಬಳಿಕ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಸುವರ್ಣ ತೀರ್ಥ ಮಂಟಪದಲ್ಲಿ ಕೂತು ಪ್ರಸಾದ ಸ್ವೀಕರಿಸಿದರು. ಬಳಿಕ ಮಠದ ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ವೇಳೆ ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಪವನ್ ಕಲ್ಯಾಣ್ ಪುತ್ತಿಗೆ ಶ್ರೀಗಳ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಪವನ್, ನಾನು ಮೆಕಾಲೆಯ ಇಂಗ್ಲಿಷ್ ನಲ್ಲಿ ಮಾತನಾಡುತ್ತೇನೆ, ಸನಾತನ ಧರ್ಮವನ್ನು ಇಂಗ್ಲಿಷ್ ಭಾಷೆ ನಾಶ ಮಾಡುತ್ತದೆ ಎಂದು ಮೆಕಾಲೆ ಹೇಳಿದ್ದ, ಆದರೆ ಸನಾತನ ಧರ್ಮದ ಶಕ್ತಿಯ ಮುಂದೆ ಅದು ಸಾಧ್ಯವಾಗಿಲ್ಲ. ವೇದ ಮತ್ತು ಗೀತೆಯಿಂದ ನಮ್ಮ ಸಂಸ್ಕೃತಿ ಉಳಿಸಿಕೊಂಡೆವು, ಸ್ವಾಮಿಗಳು ಆಹ್ವಾನ ನೀಡಿರುವುದು ಅಚ್ಚರಿ ಮೂಡಿದೆ, ನನಗೆ ಕರ್ಮ ಯೋಗದಲ್ಲಿ ನಂಬಿಕೆ ಇದೆ. ಫಲಗಳ ನಿರೀಕ್ಷೆ ನನಗೆ ಇಲ್ಲ, ನಾನು ವಿದ್ವಾಂಸರ ಕುಟುಂಬದಿಂದ ಬಂದವನಲ್ಲ. ಭಕ್ತರ ಕುಟುಂಬದಿಂದ ಬಂದವನು, ಹನುಮ ಭಕ್ತರ ಕುಟುಂಬ ನಮ್ಮದು. ಹರೇ ರಾಮ ಹರೇ ಕೃಷ್ಣ ಎಂದು ನಮಗೆ ತಂದೆ ಕಲಿಸಿದ್ದರು.
ತಾರಕ ಮಂತ್ರ ನನ್ನ ಜೀವನದಲ್ಲಿ ಪವಾಡ ಮಾಡಿದೆ. ಹರೇ ರಾಮ ಹರೇ ರಾಮ ಹರೇ ಕೃಷ್ಣ ಹರೇ ಕೃಷ್ಣ ಹರೇ ಹರೇ ಎಂದು ಹೇಳುತ್ತಾ ಬಂದ ಕುಟುಂಬ, ಮಾನಸಿಕವಾಗಿ ಕುಗ್ಗಿದಾಗಲೆಲ್ಲ ಈ ಮಂತ್ರ ನನ್ನನ್ನು ಮೇಲಕ್ಕೆ ಎತ್ತಿದೆ. ಉಡುಪಿ ವೈಕುಂಠವಾಗಿದ್ದು, ಆಧ್ಯಾತ್ಮದ ಸೆಳೆತ ಇಲ್ಲಿ ನಾನು ಕಂಡಿದ್ದೇನೆ. ಇದು ಆಧ್ಯಾತ್ಮದ ಪವರ್ ಹೌಸ್ ಎಂದರು.
Andhra Pradesh Deputy Chief Minister Pawan Kalyan visited Udupi Sri Krishna Math and offered prayers through the newly gold-plated Kanakana Kindi. Speaking at the Geetotsava event, he said the Taraka Mantra “Hare Rama Hare Krishna” uplifted him during tough times and praised Udupi as a “spiritual powerhouse.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm