ಬ್ರೇಕಿಂಗ್ ನ್ಯೂಸ್
08-12-25 10:11 pm Mangalore Correspondent ಕರಾವಳಿ
ಮಂಗಳೂರು, ಡಿ.8 : 2024ರ ಫೆಬ್ರವರಿ ತಿಂಗಳಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟು ಸಾಮರಸ್ಯ ಕೆಡಿಸುವ ಯತ್ನ ಮಾಡಿದ್ದು ಘಟನೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿದೇಶದಲ್ಲಿ ಅಡಗಿದ್ದ ಆರೋಪಿಯನ್ನು ಇದೀಗ ಅಲ್ಲಿಂದ ಬರುವಾಗಲೇ ಮುಂಬೈ ಏರ್ಪೋರ್ಟ್ ನಲ್ಲಿ ಬಂಧಿಸಲಾಗಿದೆ.
ಆರೋಪಿಯನ್ನು ಮುಂಬೈನ ಚಾರ್ಕೋಪ್ ಎಂಬಲ್ಲಿನ ನಿವಾಸಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂದು ಗುರುತಿಸಲಾಗಿದೆ. ಅವಹೇಳನ ಪೋಸ್ಟ್ ವೈರಲ್ ಮಾಡಿದ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಅ.ಕ್ರ ನಂಬ್ರ-29/2024 ಕಲಂ 153(ಎ), 504, 507, 509 ಐಪಿಸಿ & ಕಲಂ 66(ಡಿ) ಐ.ಟಿ ಕಾಯ್ದೆ ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಫೆಲಿಕ್ಸ್ ಆ ಸಮಯದಲ್ಲಿ ಸೌದಿ ಅರೇಬಿಯಾದಲ್ಲಿದ್ದು, ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಬಳಿಕ ಫೆಲಿಕ್ಸ್ ಸೌದಿಯಲ್ಲಿ ಉದ್ಯೋಗದಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಆರೋಪಿ ವಿರುದ್ದ ಲುಕ್ ಔಟ್ ಸರ್ಕುಲರ್ ಹೊರಡಿಸಲಾಗಿತ್ತು.
ಆರೋಪಿ ಫೆಲಿಕ್ಸ್ ಮುಂಬೈನ ಸಹರಾ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದು ಇಳಿದ ಕೂಡಲೇ ಇಮಿಗ್ರೇಶನ್ ಅಧಿಕಾರಿಗಳು ತಡೆಹಿಡಿದಿದ್ದು, ಡಿ. 5ರಂದು ಮುಂಬೈಯ ಸಹರಾ ಏರ್ಪೋರ್ಟ್ ನಲ್ಲಿ ದಸ್ತಗಿರಿ ಮಾಡಿ ತನಿಖೆಗೆ ಒಳಪಡಿಸಲಾಗಿದೆ. ಆನಂತರ, ಕಂಕನಾಡಿ ಪೊಲೀಸರು ಮಂಗಳೂರಿಗೆ ಕರೆತಂದಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯ ಪಾಸ್ ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ಇನ್ನೋರ್ವ ಆರೋಪಿತ ಎವಿಜಿನ್ ಜಾನ್ ಡಿಸೋಜಾ (57) ಎಂಬವನನ್ನು 2024ರ ನವೆಂಬರ್ 11ರಂದು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
A man accused of posting derogatory content against the Bhagavad Gita and women in February 2024 was arrested at Mumbai Airport upon arrival from abroad. The accused, Felix Edward Mathais (56), a resident of Charkop, Mumbai, had allegedly circulated an offensive social media post intended to disturb communal harmony.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm