ಬ್ರೇಕಿಂಗ್ ನ್ಯೂಸ್
09-12-25 11:55 am Udupi Correspondent ಕರಾವಳಿ
ಉಡುಪಿ, ಡಿ.9 : ಉದ್ಯಾವರದಲ್ಲಿ ಅಸ್ವಸ್ಥಗೊಂಡ ರೋಗಿಯೊಬ್ಬರಿಗೆ ರಾತ್ರಿ 7 ಗಂಟೆಯಿಂದ 9.30ರ ವರೆಗು ಯಾವುದೇ ಆಂಬ್ಯುಲೆನ್ಸ್ ಸಿಗದೆ ಬೇಸತ್ತ ಸಾಮಾಜಿಕ ಕಾರ್ಯಕರ್ತರೊಬ್ಬರು ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇಟ್ಟು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ರೋಗಿಯ ಸಂಬಂಧಪಟ್ಟವರು 108 ಆಂಬ್ಯು ಲೆನ್ಸ್ಗೆ ಕರೆ ಮಾಡಿದಾಗ ಆಂಬ್ಯುಲೆನ್ಸ್ ಲಭ್ಯವಿರಲಿಲ್ಲ. ಖಾಸಗಿ ಆಂಬ್ಯುಲೆನ್ಸ್ಗಳು ಕೂಡ ಲಭ್ಯವಿಲ್ಲದಿರುವುದರಿಂದ ರೋಗಿಯ ಕಡೆಯವರು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸಂಪರ್ಕಿಸಿದ್ದರು. .
ವಿಶು ಶೆಟ್ಟಿ ಕೂಡ ಖಾಸಗಿ ಆಂಬ್ಯುಲೆನ್ಸ್ ಸಂಪರ್ಕಿಸಿದ್ದು, ಆಂಬ್ಯುಲೆನ್ಸ್ ಸಿಗದೇ ಇರುವುದರಿಂದ ರೋಗಿ ತೀರಾ ಚಿಂತಾಜನಕ ಸ್ಥಿತಿಗೆ ತಲುಪಿದ್ದರು. ಬೇರೆ ದಾರಿ ಕಾಣದೇ ತನ್ನ ಗೂಡ್ಸ್ ಟೆಂಪೋಗೆ ಮಂಚ ಇಟ್ಟು ಅದರಲ್ಲಿ ರೋಗಿಯನ್ನು ಮಲಗಿಸಿ ಜಿಲ್ಲಾಸ್ಪತ್ರೆಗೆ ತಲುಪಿಸಿದ್ದಾರೆ.
ಕಳೆದೊಂದು ವರ್ಷದಿಂದ 108 ಆಂಬ್ಯುಲೆನ್ಸ್ ಸರಿಯಾಗಿ ಲಭ್ಯ ಇಲ್ಲದಿರುವುದರಿಂದ ನೂರಾರು ರೋಗಿಗಳು ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ಸರಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಘಟನೆಯಲ್ಲಿ ಎರಡೂವರೆ ಗಂಟೆ ಆಂಬ್ಯುಲೆನ್ಸ್ ಸಿಗದೆ ರೋಗಿ ಚಿಂತಾಜನಕ ಪರಿಸ್ಥಿತಿ ತಲುಪಿದ್ದು, ವಿಧಿ ಇಲ್ಲದೇ ಗೂಡ್ಸ್ ಟೆಂಪೋದಲ್ಲಿ ರೋಗಿಯನ್ನು ಕರೆದುಕೊಂಡು ಹೋಗಬೇಕಾಯಿತು. ಇನ್ನಾದರೂ ಜಿಲ್ಲಾಡಳಿತ ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಿಶು ಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.
A shocking incident unfolded in Udyavara, Udupi, where a critically ill patient had to be transported to the hospital in a goods tempo fitted with a cot, after waiting two and a half hours for an ambulance that never arrived.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm