ಬ್ರೇಕಿಂಗ್ ನ್ಯೂಸ್
09-12-25 11:55 am Udupi Correspondent ಕರಾವಳಿ
ಉಡುಪಿ, ಡಿ.9 : ಉದ್ಯಾವರದಲ್ಲಿ ಅಸ್ವಸ್ಥಗೊಂಡ ರೋಗಿಯೊಬ್ಬರಿಗೆ ರಾತ್ರಿ 7 ಗಂಟೆಯಿಂದ 9.30ರ ವರೆಗು ಯಾವುದೇ ಆಂಬ್ಯುಲೆನ್ಸ್ ಸಿಗದೆ ಬೇಸತ್ತ ಸಾಮಾಜಿಕ ಕಾರ್ಯಕರ್ತರೊಬ್ಬರು ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇಟ್ಟು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ರೋಗಿಯ ಸಂಬಂಧಪಟ್ಟವರು 108 ಆಂಬ್ಯು ಲೆನ್ಸ್ಗೆ ಕರೆ ಮಾಡಿದಾಗ ಆಂಬ್ಯುಲೆನ್ಸ್ ಲಭ್ಯವಿರಲಿಲ್ಲ. ಖಾಸಗಿ ಆಂಬ್ಯುಲೆನ್ಸ್ಗಳು ಕೂಡ ಲಭ್ಯವಿಲ್ಲದಿರುವುದರಿಂದ ರೋಗಿಯ ಕಡೆಯವರು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸಂಪರ್ಕಿಸಿದ್ದರು. .
ವಿಶು ಶೆಟ್ಟಿ ಕೂಡ ಖಾಸಗಿ ಆಂಬ್ಯುಲೆನ್ಸ್ ಸಂಪರ್ಕಿಸಿದ್ದು, ಆಂಬ್ಯುಲೆನ್ಸ್ ಸಿಗದೇ ಇರುವುದರಿಂದ ರೋಗಿ ತೀರಾ ಚಿಂತಾಜನಕ ಸ್ಥಿತಿಗೆ ತಲುಪಿದ್ದರು. ಬೇರೆ ದಾರಿ ಕಾಣದೇ ತನ್ನ ಗೂಡ್ಸ್ ಟೆಂಪೋಗೆ ಮಂಚ ಇಟ್ಟು ಅದರಲ್ಲಿ ರೋಗಿಯನ್ನು ಮಲಗಿಸಿ ಜಿಲ್ಲಾಸ್ಪತ್ರೆಗೆ ತಲುಪಿಸಿದ್ದಾರೆ.
ಕಳೆದೊಂದು ವರ್ಷದಿಂದ 108 ಆಂಬ್ಯುಲೆನ್ಸ್ ಸರಿಯಾಗಿ ಲಭ್ಯ ಇಲ್ಲದಿರುವುದರಿಂದ ನೂರಾರು ರೋಗಿಗಳು ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ಸರಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಘಟನೆಯಲ್ಲಿ ಎರಡೂವರೆ ಗಂಟೆ ಆಂಬ್ಯುಲೆನ್ಸ್ ಸಿಗದೆ ರೋಗಿ ಚಿಂತಾಜನಕ ಪರಿಸ್ಥಿತಿ ತಲುಪಿದ್ದು, ವಿಧಿ ಇಲ್ಲದೇ ಗೂಡ್ಸ್ ಟೆಂಪೋದಲ್ಲಿ ರೋಗಿಯನ್ನು ಕರೆದುಕೊಂಡು ಹೋಗಬೇಕಾಯಿತು. ಇನ್ನಾದರೂ ಜಿಲ್ಲಾಡಳಿತ ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಿಶು ಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.
A shocking incident unfolded in Udyavara, Udupi, where a critically ill patient had to be transported to the hospital in a goods tempo fitted with a cot, after waiting two and a half hours for an ambulance that never arrived.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm