ಬ್ರೇಕಿಂಗ್ ನ್ಯೂಸ್
09-12-25 11:55 am Udupi Correspondent ಕರಾವಳಿ
ಉಡುಪಿ, ಡಿ.9 : ಉದ್ಯಾವರದಲ್ಲಿ ಅಸ್ವಸ್ಥಗೊಂಡ ರೋಗಿಯೊಬ್ಬರಿಗೆ ರಾತ್ರಿ 7 ಗಂಟೆಯಿಂದ 9.30ರ ವರೆಗು ಯಾವುದೇ ಆಂಬ್ಯುಲೆನ್ಸ್ ಸಿಗದೆ ಬೇಸತ್ತ ಸಾಮಾಜಿಕ ಕಾರ್ಯಕರ್ತರೊಬ್ಬರು ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇಟ್ಟು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ರೋಗಿಯ ಸಂಬಂಧಪಟ್ಟವರು 108 ಆಂಬ್ಯು ಲೆನ್ಸ್ಗೆ ಕರೆ ಮಾಡಿದಾಗ ಆಂಬ್ಯುಲೆನ್ಸ್ ಲಭ್ಯವಿರಲಿಲ್ಲ. ಖಾಸಗಿ ಆಂಬ್ಯುಲೆನ್ಸ್ಗಳು ಕೂಡ ಲಭ್ಯವಿಲ್ಲದಿರುವುದರಿಂದ ರೋಗಿಯ ಕಡೆಯವರು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸಂಪರ್ಕಿಸಿದ್ದರು. .
ವಿಶು ಶೆಟ್ಟಿ ಕೂಡ ಖಾಸಗಿ ಆಂಬ್ಯುಲೆನ್ಸ್ ಸಂಪರ್ಕಿಸಿದ್ದು, ಆಂಬ್ಯುಲೆನ್ಸ್ ಸಿಗದೇ ಇರುವುದರಿಂದ ರೋಗಿ ತೀರಾ ಚಿಂತಾಜನಕ ಸ್ಥಿತಿಗೆ ತಲುಪಿದ್ದರು. ಬೇರೆ ದಾರಿ ಕಾಣದೇ ತನ್ನ ಗೂಡ್ಸ್ ಟೆಂಪೋಗೆ ಮಂಚ ಇಟ್ಟು ಅದರಲ್ಲಿ ರೋಗಿಯನ್ನು ಮಲಗಿಸಿ ಜಿಲ್ಲಾಸ್ಪತ್ರೆಗೆ ತಲುಪಿಸಿದ್ದಾರೆ.
ಕಳೆದೊಂದು ವರ್ಷದಿಂದ 108 ಆಂಬ್ಯುಲೆನ್ಸ್ ಸರಿಯಾಗಿ ಲಭ್ಯ ಇಲ್ಲದಿರುವುದರಿಂದ ನೂರಾರು ರೋಗಿಗಳು ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ಸರಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಘಟನೆಯಲ್ಲಿ ಎರಡೂವರೆ ಗಂಟೆ ಆಂಬ್ಯುಲೆನ್ಸ್ ಸಿಗದೆ ರೋಗಿ ಚಿಂತಾಜನಕ ಪರಿಸ್ಥಿತಿ ತಲುಪಿದ್ದು, ವಿಧಿ ಇಲ್ಲದೇ ಗೂಡ್ಸ್ ಟೆಂಪೋದಲ್ಲಿ ರೋಗಿಯನ್ನು ಕರೆದುಕೊಂಡು ಹೋಗಬೇಕಾಯಿತು. ಇನ್ನಾದರೂ ಜಿಲ್ಲಾಡಳಿತ ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಿಶು ಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.
A shocking incident unfolded in Udyavara, Udupi, where a critically ill patient had to be transported to the hospital in a goods tempo fitted with a cot, after waiting two and a half hours for an ambulance that never arrived.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm