ಬ್ರೇಕಿಂಗ್ ನ್ಯೂಸ್
12-12-25 02:02 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಈ ಅಕ್ರಮದ ಬಗ್ಗೆ ತಿಳಿದ ಕೂಡಲೇ ಆಡಿಯೋ-ವೀಡಿಯೋ ಮಾತ್ರವಲ್ಲದೇ ಅವಧಿ ಮೀರಿದ ಔಷಧಿಗಳ ರಾಶಿಯ ದಾಖಲೆಗಳ ಸಮೇತ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಭಾಗದ ಅವಧಿ ಮೀರಿದ ಔಷಧಿಗಳನ್ನು ಏಜೆಂಟರ ಮುಖಾಂತರ ಮಂಗಳೂರಿಗೆ ತರುವ ವ್ಯವಸ್ಥಿತ ಜಾಲವಿದೆ. ಈ ಬಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದರೂ ಯಾಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ? ಸರ್ಕಾರವೇ ಇವರ ರಕ್ಷಣೆಗೆ ನಿಂತಿದೆಯಾ? ಪೂರೈಕೆ ಮಾಡಿದ್ದು ಯಾರು? ಈ ಅಕ್ರಮದ ಹಿಂದಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಮಂಗಳೂರಿನ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್ ಕಂಪೆನಿಯವರು ಸಿ.ಎಸ್.ಆರ್ ಅನುದಾನದಡಿ ನೀಡಿದ 38.50 ಲಕ್ಷದಲ್ಲಿ ಅಕ್ರಮವಾಗಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಇಂತಹ ಅಕ್ರಮ ಎಸಗಲು ಅಧಿಕಾರಿಗಳಿಗೆ ಧೈರ್ಯ ಬರಲು ಹೇಗೆ ಸಾಧ್ಯ? ಅವರ ಹಿಂದೆ ಯಾರಿದ್ದಾರೆ? ಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾಕೆ ಕ್ರಮವಾಗಿಲ್ಲ? ಹೀಗಾದರೆ ಇನ್ನು ಮೇಲೆ ಯಾವ ಕಂಪೆನಿ ತಾನೇ ಇಂತಹ ಸರ್ಕಾರಿ ಸಂಸ್ಥೆಗಳಿಗೆ ಸಿ.ಎಸ್.ಆರ್ ಅನುದಾನವನ್ನು ನೀಡಲು ಮುಂದೆ ಬರುತ್ತದೆ ಎಂದು ಪ್ರಶ್ನಿಸಿದರು.
MLA Vedavyas Kamath strongly objected in the Belagavi Assembly session to the government’s failure to take action against officials of the Mangaluru AYUSH Department who allegedly supplied expired medicines, endangering the lives of patients.
12-12-25 03:18 pm
HK News Desk
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ವ...
11-12-25 10:57 pm
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
12-12-25 02:02 pm
Mangalore Correspondent
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm