ಬ್ರೇಕಿಂಗ್ ನ್ಯೂಸ್
12-12-25 02:02 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಈ ಅಕ್ರಮದ ಬಗ್ಗೆ ತಿಳಿದ ಕೂಡಲೇ ಆಡಿಯೋ-ವೀಡಿಯೋ ಮಾತ್ರವಲ್ಲದೇ ಅವಧಿ ಮೀರಿದ ಔಷಧಿಗಳ ರಾಶಿಯ ದಾಖಲೆಗಳ ಸಮೇತ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಭಾಗದ ಅವಧಿ ಮೀರಿದ ಔಷಧಿಗಳನ್ನು ಏಜೆಂಟರ ಮುಖಾಂತರ ಮಂಗಳೂರಿಗೆ ತರುವ ವ್ಯವಸ್ಥಿತ ಜಾಲವಿದೆ. ಈ ಬಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದರೂ ಯಾಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ? ಸರ್ಕಾರವೇ ಇವರ ರಕ್ಷಣೆಗೆ ನಿಂತಿದೆಯಾ? ಪೂರೈಕೆ ಮಾಡಿದ್ದು ಯಾರು? ಈ ಅಕ್ರಮದ ಹಿಂದಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಮಂಗಳೂರಿನ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್ ಕಂಪೆನಿಯವರು ಸಿ.ಎಸ್.ಆರ್ ಅನುದಾನದಡಿ ನೀಡಿದ 38.50 ಲಕ್ಷದಲ್ಲಿ ಅಕ್ರಮವಾಗಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಇಂತಹ ಅಕ್ರಮ ಎಸಗಲು ಅಧಿಕಾರಿಗಳಿಗೆ ಧೈರ್ಯ ಬರಲು ಹೇಗೆ ಸಾಧ್ಯ? ಅವರ ಹಿಂದೆ ಯಾರಿದ್ದಾರೆ? ಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾಕೆ ಕ್ರಮವಾಗಿಲ್ಲ? ಹೀಗಾದರೆ ಇನ್ನು ಮೇಲೆ ಯಾವ ಕಂಪೆನಿ ತಾನೇ ಇಂತಹ ಸರ್ಕಾರಿ ಸಂಸ್ಥೆಗಳಿಗೆ ಸಿ.ಎಸ್.ಆರ್ ಅನುದಾನವನ್ನು ನೀಡಲು ಮುಂದೆ ಬರುತ್ತದೆ ಎಂದು ಪ್ರಶ್ನಿಸಿದರು.
MLA Vedavyas Kamath strongly objected in the Belagavi Assembly session to the government’s failure to take action against officials of the Mangaluru AYUSH Department who allegedly supplied expired medicines, endangering the lives of patients.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm