ಬ್ರೇಕಿಂಗ್ ನ್ಯೂಸ್
12-12-25 02:02 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಬೆಳಗಾವಿ ಅಧಿವೇಶನದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಈ ಅಕ್ರಮದ ಬಗ್ಗೆ ತಿಳಿದ ಕೂಡಲೇ ಆಡಿಯೋ-ವೀಡಿಯೋ ಮಾತ್ರವಲ್ಲದೇ ಅವಧಿ ಮೀರಿದ ಔಷಧಿಗಳ ರಾಶಿಯ ದಾಖಲೆಗಳ ಸಮೇತ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಭಾಗದ ಅವಧಿ ಮೀರಿದ ಔಷಧಿಗಳನ್ನು ಏಜೆಂಟರ ಮುಖಾಂತರ ಮಂಗಳೂರಿಗೆ ತರುವ ವ್ಯವಸ್ಥಿತ ಜಾಲವಿದೆ. ಈ ಬಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದರೂ ಯಾಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ? ಸರ್ಕಾರವೇ ಇವರ ರಕ್ಷಣೆಗೆ ನಿಂತಿದೆಯಾ? ಪೂರೈಕೆ ಮಾಡಿದ್ದು ಯಾರು? ಈ ಅಕ್ರಮದ ಹಿಂದಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.
ಅಲ್ಲದೇ ಮಂಗಳೂರಿನ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್ ಕಂಪೆನಿಯವರು ಸಿ.ಎಸ್.ಆರ್ ಅನುದಾನದಡಿ ನೀಡಿದ 38.50 ಲಕ್ಷದಲ್ಲಿ ಅಕ್ರಮವಾಗಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಇಂತಹ ಅಕ್ರಮ ಎಸಗಲು ಅಧಿಕಾರಿಗಳಿಗೆ ಧೈರ್ಯ ಬರಲು ಹೇಗೆ ಸಾಧ್ಯ? ಅವರ ಹಿಂದೆ ಯಾರಿದ್ದಾರೆ? ಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾಕೆ ಕ್ರಮವಾಗಿಲ್ಲ? ಹೀಗಾದರೆ ಇನ್ನು ಮೇಲೆ ಯಾವ ಕಂಪೆನಿ ತಾನೇ ಇಂತಹ ಸರ್ಕಾರಿ ಸಂಸ್ಥೆಗಳಿಗೆ ಸಿ.ಎಸ್.ಆರ್ ಅನುದಾನವನ್ನು ನೀಡಲು ಮುಂದೆ ಬರುತ್ತದೆ ಎಂದು ಪ್ರಶ್ನಿಸಿದರು.
MLA Vedavyas Kamath strongly objected in the Belagavi Assembly session to the government’s failure to take action against officials of the Mangaluru AYUSH Department who allegedly supplied expired medicines, endangering the lives of patients.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm