ಬ್ರೇಕಿಂಗ್ ನ್ಯೂಸ್
13-12-25 04:36 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಬಜ್ಪೆ ಠಾಣೆ ವ್ಯಾಪ್ತಿಯ ಕೆಂಜಾರು ಬಳಿಯ ಪೊದೆಗಳ ಎಡೆಯಲ್ಲಿ ಹಲವಾರು ಗೋವುಗಳನ್ನು ಕಡಿದು ಹತ್ಯೆ ಮಾಡಿರುವುದು ಪತ್ತೆಯಾಗಿದ್ದು, ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಂಜಾರಿನ ಕಪಿಲಾ ಗೋಶಾಲೆಯಿಂದ ಕಳೆದ 15 ದಿನಗಳಲ್ಲಿ ಎಂಟು ಗೋವುಗಳನ್ನು ಕಳವು ಮಾಡಿರುವ ಬಗ್ಗೆ ಗೋಶಾಲೆಯ ಸಂಚಾಲಕ ಪ್ರಕಾಶ್ ಶೆಟ್ಟಿ ಬಜ್ಪೆ ಠಾಣೆಗೆ ದೂರು ನೀಡಿದ್ದರು. ಇದರಂತೆ, ಹುಡುಕಾಟ ನಡೆಸಿದಾಗ ಕೆಂಜಾರಿನಲ್ಲಿ ಕೋಸ್ಟ್ ಗಾರ್ಡ್ ಅಕಾಡೆಮಿಗೆ ಮೀಸಲಾದ ಖಾಲಿ ಜಾಗದಲ್ಲಿ ಗೋವುಗಳನ್ನು ಹತ್ಯೆ ಮಾಡಿರುವ ಜಾಗ ಪತ್ತೆಯಾಗಿದೆ.



ಸ್ಥಳದಲ್ಲಿ ಇಪ್ಪತ್ತಕ್ಕೂ ಹೆಚ್ಚು ಗೋವುಗಳನ್ನು ಕಡಿದು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ. ಗೋವಿನ ಕೈಕಾಲುಗಳು, ಚರ್ಮ, ಇನ್ನಿತರ ತ್ಯಾಜ್ಯಗಳನ್ನು ಪೊದೆಗಳ ಎಡೆಯಲ್ಲಿ ಎಸೆಯಲಾಗಿದ್ದು, ಸ್ಥಳದಲ್ಲಿ ಹಸಿ ಹಸಿ ರಕ್ತ ಚೆಲ್ಲಿರುವುದು ಕಂಡುಬಂದಿದೆ. ಅಲ್ಲದೆ, ಒಂದು ದನ ಮತ್ತು ಇನ್ನೊಂದು ಹೋರಿಯನ್ನು ಸ್ಥಳದಲ್ಲಿ ಕಟ್ಟಿ ಹಾಕಿರುವುದು ಪತ್ತೆಯಾಗಿದ್ದು ಪ್ರಕಾಶ್ ಶೆಟ್ಟಿ ಅದು ತಮ್ಮ ಗೋಶಾಲೆಯದ್ದೆಂದು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಬಜ್ಪೆ ಠಾಣೆ ಪೊಲೀಸರು ಪ್ರಕಾಶ್ ಶೆಟ್ಟಿ ದೂರಿನಂತೆ ಕೇಸು ದಾಖಲಿಸಿದ್ದಾರೆ. ಸ್ಥಳದಲ್ಲಿ ಕಟುಕರು ಗೋವುಗಳನ್ನು ಕದ್ದು ತಂದು ಹತ್ಯೆಗೈದು ಮಾಂಸ ಮಾಡಿ ಒಯ್ದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಬಜರಂಗದಳ ಕಾರ್ಯಕರ್ತರು ತಿಳಿಸಿದ್ದಾರೆ.
The alleged slaughter of several cattle has come to light near Kenjaru, under the jurisdiction of Bajpe Police Station, after remains of cows were found dumped in nearby bushes. Following the discovery, Bajrang Dal activists visited the spot and staged protests, expressing outrage over the incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm