ಬ್ರೇಕಿಂಗ್ ನ್ಯೂಸ್
16-12-25 01:23 pm Mangalore Correspondent ಕರಾವಳಿ
ಉಳ್ಳಾಲ, ಡಿ.16 : ಮನೆಯ ಹಿಂದಿನ ಆವರಣ ಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ ವಲಸೆ ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನ ಕೂಳೂರಿನಲ್ಲಿ ವಾಸವಾಗಿರುವ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಹನುಮಕಟ್ಟೆ ನಿವಾಸಿ ಬಾಳಪ್ಪ (35) ಮೃತ ವ್ಯಕ್ತಿ. ಸೇವಂತಿಗುತ್ತುವಿನ ಗೌತಮ್ ರಾಜ್ ಎಂಬವರ ಮನೆಯ ಹಿಂಭಾಗದಲ್ಲಿ ಕಳೆದ ಮಳೆಗಾಲದಲ್ಲಿ ಎತ್ತರ ಪ್ರದೇಶದ ಗುಡ್ಡದ ಮಣ್ಣು ಕುಸಿತವಾಗಿತ್ತು. ಗೌತಮ್ ರಾಜ್ ಅವರು ಕೆಲ ದಿನಗಳ ಹಿಂದಷ್ಟೆ ಮನೆಯ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದರು.







ಮಂಗಳವಾರ ಜೆಸಿಬಿ ಸಹಿತ ವಲಸೆ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ, ಶಿವು ಎಂಬವರು ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಮನೆಯ ಹಿಂಭಾಗದ ಎತ್ತರದ ಗುಡ್ಡದ ಮಣ್ಣು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ ಮಣ್ಣಿನಡಿ ಸಿಲುಕಿದ್ದಾರೆ. ಹನುಮಂತ ಮತ್ತು ಭೀಮಪ್ಪ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದು, ಮಣ್ಣಿನಡಿ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಳಪ್ಪನನ್ನ ಸ್ಥಳೀಯರು ಹರಸಾಹಸ ಪಟ್ಟು ಹೊರ ತೆಗೆದರೂ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಎಸ್ಡಿಆರ್ ಎಫ್, ಅಗ್ನಿಶಾಮಕ ದಳ, ಎಸಿಪಿ ವಿಜಯಕ್ರಾಂತಿ, ಉಳ್ಳಾಲ ಪೊಲೀಸ್ ನಿರೀಕ್ಷರಾದ ವಿರೂಪಾಕ್ಷ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಳಪ್ಪ ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.
A migrant labourer lost his life after being buried under soil when a mound collapsed during compound wall construction at Sevanthiguttu near Kallapu in Ullal on Tuesday morning. The deceased has been identified as Balappa (35), a native of Hanumakatte in Hungund taluk of Bagalkote district, who was residing in Kuloor, Mangaluru. The incident occurred while construction work was underway behind a house, where soil from an elevated mound suddenly gave way.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 01:56 pm
HK News Desk
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
16-12-25 04:26 pm
Udupi Correspondent
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm