ಬ್ರೇಕಿಂಗ್ ನ್ಯೂಸ್
17-12-25 05:05 pm Mangalore Correspondent ಕರಾವಳಿ
ಮಂಗಳೂರು, ಡಿ.17 : ಮಂಗಳೂರು ಜೈಲಿನಲ್ಲಿ ಹಿಂದು- ಮುಸ್ಲಿಂ ಕೈದಿಗಳ ಮಧ್ಯೆ ವಾಗ್ವಾದ- ಸಂಘರ್ಷ- ಗದ್ದಲ ನಡೆದಿದ್ದು, ಸಿಸಿಬಿ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿ ಎರಡೂ ಕಡೆಯ ಗುಂಪುಗಳಿಗೆ ಥಳಿಸಿ ಚೆನ್ನಾಗಿ ಬೆಂಡೆತ್ತಿದ್ದಾರೆ.
ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಸೋಮವಾರ ಸಂಜೆ ಕೋಕಾ ಆಕ್ಟಿನಡಿ ಬಂಧಿತನಾಗಿರುವ ಭರತ್ ಕುಮ್ಡೇಲ್ ಜೊತೆಗೆ ಮಾತನಾಡಲು ಸಂಬಂಧಿಕರು ಬಂದಿದ್ದರು. ಆತ ಮಾತನಾಡಲು ಹೊರಗಡೆ ಬಂದು ಹಿಂದೆ ತೆರಳುವ ಸಂದರ್ಭದಲ್ಲಿ ಎ ಬ್ಯಾರಕ್ ನಲ್ಲಿರುವ ಕೈದಿಗಳು ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.
ಆನಂತರ, ಈ ವಿಷಯ ತಿಳಿದ ಬಿ ಬ್ಯಾರಕಿನ ಹಿಂದು ಕೈದಿಗಳು ರಂಪ ಮಾಡಿದ್ದು ಎರಡೂ ಕಡೆಯಿಂದ ಅವಾಚ್ಯ ನಿಂದನೆ, ಜೋರು ಗದ್ದಲ ಎಬ್ಬಿಸಿದ್ದಾರೆ. ವಿಷಯ ತಿಳಿದ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ರಾತ್ರಿ ವೇಳೆ ಸಿಸಿಬಿ ತಂಡದೊಂದಿಗೆ ಜೈಲಿಗೆ ಬಂದಿದ್ದು, ಗಲಾಟೆ ನಡೆಸಿದ ಎರಡೂ ಕಡೆಯವರಿಗೆ ಲಾಠಿ ರುಚಿ ನೀಡಿದ್ದಾರೆ.
ಘಟನೆ ಬಗ್ಗೆ ಜೈಲು ಸುಪರಿಡೆಂಟ್ ಶರಣಬಸಪ್ಪ ಬರ್ಕೆ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ. ಎ ಬ್ಯಾರಕಿನ ಮೊಯ್ದೀನ್ ಪರಾದ್, ಸರ್ಫರಾಜ್, ಮಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಶಾದ್, ಮಹಮ್ಮದ್ ಸಾಹಿಲ್, ಮಹಮ್ಮದ್ ಹನೀಫ್ ಮತ್ತು ಬಿ ಬ್ಯಾರಕಿನ ಲತೀಶ್ ಜೋಗಿ, ಮಂಜುನಾಥ್, ಮುರುಗನ್, ಸಚಿನ್ ತಲಪಾಡಿ, ತುಷಾರ್ ಅಮೀನ್, ಶಬರೀಶ್, ಗುರುರಾಜ್, ಸುಮಂತ್ ಎಂಬ ಕೈದಿಗಳ ಮೇಲೆ ಕೇಸು ದಾಖಲಾಗಿದೆ.
ಇದೇ ವೇಳೆ, ಪೊಲೀಸರು ಜೈಲಿನ ಒಳಗಡೆ ತಪಾಸಣೆ ನಡೆಸಿದ್ದು ಮೂರು ಆಂಡ್ರಾಯ್ಡ್ ಮೊಬೈಲ್ ಮತ್ತು ಇನ್ನೊಂದು ಸಣ್ಣ ಕೀಪ್ಯಾಡ್ ಮೊಬೈಲ್ ಪತ್ತೆಯಾಗಿದೆ.
A tense situation erupted at Mangaluru Jail following a clash between Hindu and Muslim inmates, prompting the City Crime Branch (CCB) police to conduct an overnight crackdown inside the prison.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm