ಬ್ರೇಕಿಂಗ್ ನ್ಯೂಸ್
17-12-25 05:05 pm Mangalore Correspondent ಕರಾವಳಿ
ಮಂಗಳೂರು, ಡಿ.17 : ಮಂಗಳೂರು ಜೈಲಿನಲ್ಲಿ ಹಿಂದು- ಮುಸ್ಲಿಂ ಕೈದಿಗಳ ಮಧ್ಯೆ ವಾಗ್ವಾದ- ಸಂಘರ್ಷ- ಗದ್ದಲ ನಡೆದಿದ್ದು, ಸಿಸಿಬಿ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿ ಎರಡೂ ಕಡೆಯ ಗುಂಪುಗಳಿಗೆ ಥಳಿಸಿ ಚೆನ್ನಾಗಿ ಬೆಂಡೆತ್ತಿದ್ದಾರೆ.
ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಸೋಮವಾರ ಸಂಜೆ ಕೋಕಾ ಆಕ್ಟಿನಡಿ ಬಂಧಿತನಾಗಿರುವ ಭರತ್ ಕುಮ್ಡೇಲ್ ಜೊತೆಗೆ ಮಾತನಾಡಲು ಸಂಬಂಧಿಕರು ಬಂದಿದ್ದರು. ಆತ ಮಾತನಾಡಲು ಹೊರಗಡೆ ಬಂದು ಹಿಂದೆ ತೆರಳುವ ಸಂದರ್ಭದಲ್ಲಿ ಎ ಬ್ಯಾರಕ್ ನಲ್ಲಿರುವ ಕೈದಿಗಳು ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.
ಆನಂತರ, ಈ ವಿಷಯ ತಿಳಿದ ಬಿ ಬ್ಯಾರಕಿನ ಹಿಂದು ಕೈದಿಗಳು ರಂಪ ಮಾಡಿದ್ದು ಎರಡೂ ಕಡೆಯಿಂದ ಅವಾಚ್ಯ ನಿಂದನೆ, ಜೋರು ಗದ್ದಲ ಎಬ್ಬಿಸಿದ್ದಾರೆ. ವಿಷಯ ತಿಳಿದ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ರಾತ್ರಿ ವೇಳೆ ಸಿಸಿಬಿ ತಂಡದೊಂದಿಗೆ ಜೈಲಿಗೆ ಬಂದಿದ್ದು, ಗಲಾಟೆ ನಡೆಸಿದ ಎರಡೂ ಕಡೆಯವರಿಗೆ ಲಾಠಿ ರುಚಿ ನೀಡಿದ್ದಾರೆ.
ಘಟನೆ ಬಗ್ಗೆ ಜೈಲು ಸುಪರಿಡೆಂಟ್ ಶರಣಬಸಪ್ಪ ಬರ್ಕೆ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ. ಎ ಬ್ಯಾರಕಿನ ಮೊಯ್ದೀನ್ ಪರಾದ್, ಸರ್ಫರಾಜ್, ಮಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಶಾದ್, ಮಹಮ್ಮದ್ ಸಾಹಿಲ್, ಮಹಮ್ಮದ್ ಹನೀಫ್ ಮತ್ತು ಬಿ ಬ್ಯಾರಕಿನ ಲತೀಶ್ ಜೋಗಿ, ಮಂಜುನಾಥ್, ಮುರುಗನ್, ಸಚಿನ್ ತಲಪಾಡಿ, ತುಷಾರ್ ಅಮೀನ್, ಶಬರೀಶ್, ಗುರುರಾಜ್, ಸುಮಂತ್ ಎಂಬ ಕೈದಿಗಳ ಮೇಲೆ ಕೇಸು ದಾಖಲಾಗಿದೆ.
ಇದೇ ವೇಳೆ, ಪೊಲೀಸರು ಜೈಲಿನ ಒಳಗಡೆ ತಪಾಸಣೆ ನಡೆಸಿದ್ದು ಮೂರು ಆಂಡ್ರಾಯ್ಡ್ ಮೊಬೈಲ್ ಮತ್ತು ಇನ್ನೊಂದು ಸಣ್ಣ ಕೀಪ್ಯಾಡ್ ಮೊಬೈಲ್ ಪತ್ತೆಯಾಗಿದೆ.
A tense situation erupted at Mangaluru Jail following a clash between Hindu and Muslim inmates, prompting the City Crime Branch (CCB) police to conduct an overnight crackdown inside the prison.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm