ಬ್ರೇಕಿಂಗ್ ನ್ಯೂಸ್
17-12-25 05:05 pm Mangalore Correspondent ಕರಾವಳಿ
ಮಂಗಳೂರು, ಡಿ.17 : ಮಂಗಳೂರು ಜೈಲಿನಲ್ಲಿ ಹಿಂದು- ಮುಸ್ಲಿಂ ಕೈದಿಗಳ ಮಧ್ಯೆ ವಾಗ್ವಾದ- ಸಂಘರ್ಷ- ಗದ್ದಲ ನಡೆದಿದ್ದು, ಸಿಸಿಬಿ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿ ಎರಡೂ ಕಡೆಯ ಗುಂಪುಗಳಿಗೆ ಥಳಿಸಿ ಚೆನ್ನಾಗಿ ಬೆಂಡೆತ್ತಿದ್ದಾರೆ.
ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಸೋಮವಾರ ಸಂಜೆ ಕೋಕಾ ಆಕ್ಟಿನಡಿ ಬಂಧಿತನಾಗಿರುವ ಭರತ್ ಕುಮ್ಡೇಲ್ ಜೊತೆಗೆ ಮಾತನಾಡಲು ಸಂಬಂಧಿಕರು ಬಂದಿದ್ದರು. ಆತ ಮಾತನಾಡಲು ಹೊರಗಡೆ ಬಂದು ಹಿಂದೆ ತೆರಳುವ ಸಂದರ್ಭದಲ್ಲಿ ಎ ಬ್ಯಾರಕ್ ನಲ್ಲಿರುವ ಕೈದಿಗಳು ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.
ಆನಂತರ, ಈ ವಿಷಯ ತಿಳಿದ ಬಿ ಬ್ಯಾರಕಿನ ಹಿಂದು ಕೈದಿಗಳು ರಂಪ ಮಾಡಿದ್ದು ಎರಡೂ ಕಡೆಯಿಂದ ಅವಾಚ್ಯ ನಿಂದನೆ, ಜೋರು ಗದ್ದಲ ಎಬ್ಬಿಸಿದ್ದಾರೆ. ವಿಷಯ ತಿಳಿದ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ರಾತ್ರಿ ವೇಳೆ ಸಿಸಿಬಿ ತಂಡದೊಂದಿಗೆ ಜೈಲಿಗೆ ಬಂದಿದ್ದು, ಗಲಾಟೆ ನಡೆಸಿದ ಎರಡೂ ಕಡೆಯವರಿಗೆ ಲಾಠಿ ರುಚಿ ನೀಡಿದ್ದಾರೆ.
ಘಟನೆ ಬಗ್ಗೆ ಜೈಲು ಸುಪರಿಡೆಂಟ್ ಶರಣಬಸಪ್ಪ ಬರ್ಕೆ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ. ಎ ಬ್ಯಾರಕಿನ ಮೊಯ್ದೀನ್ ಪರಾದ್, ಸರ್ಫರಾಜ್, ಮಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಶಾದ್, ಮಹಮ್ಮದ್ ಸಾಹಿಲ್, ಮಹಮ್ಮದ್ ಹನೀಫ್ ಮತ್ತು ಬಿ ಬ್ಯಾರಕಿನ ಲತೀಶ್ ಜೋಗಿ, ಮಂಜುನಾಥ್, ಮುರುಗನ್, ಸಚಿನ್ ತಲಪಾಡಿ, ತುಷಾರ್ ಅಮೀನ್, ಶಬರೀಶ್, ಗುರುರಾಜ್, ಸುಮಂತ್ ಎಂಬ ಕೈದಿಗಳ ಮೇಲೆ ಕೇಸು ದಾಖಲಾಗಿದೆ.
ಇದೇ ವೇಳೆ, ಪೊಲೀಸರು ಜೈಲಿನ ಒಳಗಡೆ ತಪಾಸಣೆ ನಡೆಸಿದ್ದು ಮೂರು ಆಂಡ್ರಾಯ್ಡ್ ಮೊಬೈಲ್ ಮತ್ತು ಇನ್ನೊಂದು ಸಣ್ಣ ಕೀಪ್ಯಾಡ್ ಮೊಬೈಲ್ ಪತ್ತೆಯಾಗಿದೆ.
A tense situation erupted at Mangaluru Jail following a clash between Hindu and Muslim inmates, prompting the City Crime Branch (CCB) police to conduct an overnight crackdown inside the prison.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm