ಬ್ರೇಕಿಂಗ್ ನ್ಯೂಸ್
19-12-25 08:22 pm Mangalore Correspondent ಕರಾವಳಿ
ಮಂಗಳೂರು, ಡಿ.19 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಒಳಚರಂಡಿ, ಘನತ್ಯಾಜ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಅನೇಕರ ಬದುಕಿಗೆ ಸೇವಾ ಭದ್ರತೆಯೇ ಇಲ್ಲವಾಗಿದ್ದು ಅವರೆಲ್ಲರನ್ನು ನೇಮಕಾತಿ / ನೇರ ಪಾವತಿ ಅಥವಾ ಖಾಯಂಗೊಳಿಸಬೇಕು ಎಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಈ ವರ್ಗದ ಎಲ್ಲಾ ಕಾರ್ಮಿಕರು ಬಹಳ ಕಷ್ಟಪಟ್ಟು ದುಡಿಯುವವರು. ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಇದರಲ್ಲಿ ಹೆಚ್ಚಾಗಿದ್ದು ನಗರದ ಸ್ವಚ್ಛತೆಯ ಹಿಂದೆ ಅವರ ಅಪಾರ ಶ್ರಮವಿದೆ. ಒಂದು ದಿನ ಅವರೆಲ್ಲರೂ ಕರ್ತವ್ಯಕ್ಕೆ ಗೈರಾದರೆ ನಗರದ ಸ್ವಚ್ಛತೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುತ್ತದೆ. ಇವರಿಗೆ ಯಾವುದೇ ಪಿಂಚಣಿ ಇಲ್ಲ. ಹೀಗಾಗಿ ಭವಿಷ್ಯದಲ್ಲಿ ಇವರು ತೀವ್ರ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದಾಗೆಲ್ಲ ಆ ಪ್ರಸ್ತಾವನೆ ನಮ್ಮ ಮುಂದಿದೆ ಎಂದು ಹೇಳುತ್ತಾ ಇದೀಗ ಎರಡೂವರೆ ಎರಡು ವರ್ಷ ಕಳೆದಿವೆ ಹೊರತು ಯಾವುದೇ ಕ್ರಮ ಕೈಗೊಂಡಿಲ್ಲ.
ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಗವಾನ್ ದಾಸ್ ಮತ್ತು ಇತರರು ಪ್ರಕರಣದಲ್ಲಿ ಉಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಈ ಕಾರ್ಮಿಕರು ಮಂಗಳೂರಿನಲ್ಲಿ ಎರಡೆರಡು ಬಾರಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ನಾವು ಅವರ ನ್ಯಾಯಯುತ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಹಾಗೂ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇವೆ. ಸರ್ಕಾರ ಇನ್ನೂ ಸಹ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ನಾವೂ ಸಹ ಅವರೊಂದಿಗೆ ಪ್ರತಿಭಟನೆಯಲ್ಲಿ ಸೇರಿಕೊಳ್ಳಬೇಕಾಗುತ್ತದೆ. ಕಸ ಸಾಗಿಸುವ ವಾಹನಗಳಿಗೆ ವಿಮೆಯನ್ನೂ ನವೀಕರಣಗೊಳಿಸದೇ ಬೇಜವಾಬ್ದಾರಿ ತೋರಲಾಗಿದ್ದು ಒಂದು ವೇಳೆ ಯಾವುದೇ ದುರ್ಘಟನೆ ಸಂಭವಿಸಿ ಕಾರ್ಮಿಕರಿಗೆ ತೊಂದರೆಯಾದರೆ ಯಾರು ಹೊಣೆ? ಸರ್ಕಾರದ ಬಳಿ ವಾಹನ ವಿಮೆಗೂ ದುಡ್ಡಿಲ್ಲವೇ ಎಂದು ಶಾಸಕರು ಪ್ರಶ್ನಿಸಿದರು.
MLA Vedavyas Kamath strongly urged the Karnataka government to regularise civic workers of the Mangaluru City Corporation who have been working for many years on an outsourcing basis in departments such as underground drainage, solid waste management, and drinking water supply.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm