ಬ್ರೇಕಿಂಗ್ ನ್ಯೂಸ್
20-12-25 01:09 pm Mangalore Correspondent ಕರಾವಳಿ
ಉಳ್ಳಾಲ, ಡಿ.20 : ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣ ಬಾವಿಯಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದು, ಅನಾರೋಗ್ಯದಿಂದ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ನಿನ್ನೆ ಸಂಜೆ ಪ್ರಭಾಕರ್ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು. ಬಳಿಕ ಪತ್ನಿ ಮತ್ತು ಮಗನ ಜೊತೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಈ ವೇಳೆ ಪತ್ನಿ ಪ್ರಭಾಕರ್ ಅವರನ್ನ ಹುಡುಕಾಡಿದಾಗ ಅವರ ಶವ ಮನೆ ಆವರಣದ ಬಾವಿಯಲ್ಲಿ ಪತ್ತೆಯಾಗಿದೆ.
ಮೃತ ಪ್ರಭಾಕರ ಜೋಗಿಯವರು ನರ ದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಶುಕ್ರವಾರ ಬೆಳಗ್ಗಿನಿಂದಲೇ ಅವರು ಮಂಕಾಗಿದ್ದು ಆರೋಗ್ಯ ಸಮಸ್ಯೆಯಿಂದಲೇ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಪ್ರಭಾಕರ ಅವರು ಈ ಹಿಂದೆಯೂ ಒಮ್ಮೆ ಮನೆಯಿಂದ ನಾಪತ್ತೆಯಾಗಿದ್ದು ಬಳಿಕ ಮನೆಗೆ ಹಿಂದಿರುಗಿದ್ದರು. ಅವರು ಉಳ್ಳಾಲ ತಾಲೂಕಿನ ಹಲವು ಶಾಲೆಗಳಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ದೈಹಿಕ ಶಿಕ್ಷಕರ ಸಂಘಟನೆಗಳಲ್ಲಿಯೂ ಸಕ್ರಿಯರಾಗಿದ್ದರು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ.
In a tragic incident, Prabhakar Jogi (51), a physical education teacher at the Government School in Kallarakkodi, Naringana village, was found dead in the well of his house in Kondana, under the Kotekar town limits on Friday evening. Police suspect suicide due to health-related distress.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am