ಬ್ರೇಕಿಂಗ್ ನ್ಯೂಸ್
24-12-25 12:23 pm Mangalore Correspondent ಕರಾವಳಿ
ಮಂಗಳೂರು, ಡಿ.24 : ವಿದ್ಯಾರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ತನ್ನ ಸಂಯೋಜನೆಯಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವ್ಯಾಪ್ತಿಯೊಳಗಿನ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದನೆ ನೀಡಿದೆ. ಈ ಕುರಿತು ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ನಿರ್ಧಾರಕ್ಕೆ ಒಳಪಟ್ಟ ಕಾಲೇಜುಗಳು ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಲ್ಲಿಸಬೇಕಾಗುತ್ತದೆ. ಈಗಾಗಲೇ ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಯಾವುದೇ ತಡೆಯಿಲ್ಲದೆ ಕೋರ್ಸ್ಗಳನ್ನು ಪೂರೈಸಲು ಅವಕಾಶ ಕಲ್ಪಿಸಲಾಗುವುದು ಎಂದು ವಿಶ್ವವಿದ್ಯಾನಿಲಯ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಮತ್ತು ಕನಿಷ್ಠ 30 ವಿದ್ಯಾರ್ಥಿಗಳು ಇರಬೇಕೆಂಬ ವಿವಿ ನಿಮಯದ ಕಾರಣದಿಂದ ಸಣ್ಣ ಸಣ್ಣ ಕಾಲೇಜುಗಳು ಅಸ್ತಿತ್ವ ಕಳಕೊಂಡಿವೆ.
ಮುಚ್ಚಲಿರುವ ಕಾಲೇಜುಗಳ ಪಟ್ಟಿ
ವಿವಿಯ ಸಭೆಯಲ್ಲಿ ಮತ್ತೊಂದು ಪ್ರಮುಖ ನಿರ್ಧಾರವಾಗಿ, ಅರೇಬಿಕ್ ಭಾಷೆಯ ಅಧ್ಯಯನ ಮತ್ತು ಸಂಶೋಧನೆಗಾಗಿ ‘ಅರೇಬಿಕ್ ಅಧ್ಯಯನ ಕೇಂದ್ರ’ ಸ್ಥಾಪಿಸಲು ರಾಜ್ಯಪಾಲರ ಅನುಮೋದನೆ ದೊರೆತಿದೆ ಎಂದು ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಕೇಂದ್ರವು ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿನ ಪ್ರಾದೇಶಿಕ ಅರೇಬಿಕ್ ಉಪಭಾಷೆಗಳು, ಸ್ಥಳೀಯ ಸಂಸ್ಕೃತಿ ಹಾಗೂ ಸಮುದಾಯಗಳ ಅಧ್ಯಯನಕ್ಕೆ ಒತ್ತು ನೀಡಲಿದೆ ಎಂದು ಅವರು ಹೇಳಿದರು.
ಶೈಕ್ಷಣಿಕ ನವೀಕರಣಗಳಿಗೆ ಒಪ್ಪಿಗೆ
ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಹಲವು ಪಠ್ಯಕ್ರಮ ಸಂಬಂಧಿತ ನಿರ್ಧಾರಗಳನ್ನೂ ಕೈಗೊಳ್ಳಲಾಗಿದೆ:
ಬಿಎ ಅರ್ಥಶಾಸ್ತ್ರ ಪದವಿಯ ನಾಲ್ಕನೇ ಸೆಮಿಸ್ಟರ್ಗೆ ಕೌಶಲ್ಯಾಧಾರಿತ ಕೋರ್ಸ್ಗಳನ್ನು ಅನುಮೋದಿಸಲಾಗಿದೆ. ಬಿಎ ಪತ್ರಿಕೋದ್ಯಮದ ಮೂರನೇ ಮತ್ತು ನಾಲ್ಕನೇ ಸೆಮಿಸ್ಟರ್ಗಳಿಗೆ ಚುನಾಯಿತ (Elective) ಕೋರ್ಸ್ಗಳಿಗೆ ಒಪ್ಪಿಗೆ ನೀಡಲಾಗಿದೆ. ಎಲ್ಲಾ ಡೀನ್ಗಳು ಸಿದ್ಧಪಡಿಸಿರುವ ಪರಿಷ್ಕೃತ ಪಿಎಚ್ಡಿ ಕಾರ್ಯಕ್ರಮ ಮಾರ್ಗಸೂಚಿಗಳನ್ನು ಹೊಸ ಡಾಕ್ಟರೇಟ್ ಕೋರ್ಸ್ಗಳ ಪ್ರಾರಂಭಕ್ಕಾಗಿ ಅನುಮೋದಿಸಲಾಗಿದೆ.
Due to a drastic decline in student admissions, Mangalore University has approved the closure of 22 private colleges under its jurisdiction in Dakshina Kannada and Udupi districts. The decision was finalized during the Academic Council meeting chaired by Vice-Chancellor Prof. P.L. Dharma.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm