ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇಜುಗಳು ; ದಕ್ಷಿಣ ಕನ್ನಡ- ಉಡುಪಿ ವ್ಯಾಪ್ತಿಯಲ್ಲಿ 22 ಕಾಲೇಜುಗಳಿಗೆ ಬೀಗ ! ಮಂಗಳೂರು ವಿವಿಯಿಂದ ಅನುಮೋದನೆ 

24-12-25 12:23 pm       Mangalore Correspondent   ಕರಾವಳಿ

ವಿದ್ಯಾರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ತನ್ನ ಸಂಯೋಜನೆಯಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವ್ಯಾಪ್ತಿಯೊಳಗಿನ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದನೆ ನೀಡಿದೆ. ಈ ಕುರಿತು ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. 

ಮಂಗಳೂರು, ಡಿ.24 : ವಿದ್ಯಾರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ತನ್ನ ಸಂಯೋಜನೆಯಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವ್ಯಾಪ್ತಿಯೊಳಗಿನ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದನೆ ನೀಡಿದೆ. ಈ ಕುರಿತು ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. 

ನಿರ್ಧಾರಕ್ಕೆ ಒಳಪಟ್ಟ ಕಾಲೇಜುಗಳು ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಲ್ಲಿಸಬೇಕಾಗುತ್ತದೆ. ಈಗಾಗಲೇ ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಯಾವುದೇ ತಡೆಯಿಲ್ಲದೆ ಕೋರ್ಸ್‌ಗಳನ್ನು ಪೂರೈಸಲು ಅವಕಾಶ ಕಲ್ಪಿಸಲಾಗುವುದು ಎಂದು ವಿಶ್ವವಿದ್ಯಾನಿಲಯ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಮತ್ತು ಕನಿಷ್ಠ 30 ವಿದ್ಯಾರ್ಥಿಗಳು ಇರಬೇಕೆಂಬ ವಿವಿ ನಿಮಯದ ಕಾರಣದಿಂದ ಸಣ್ಣ ಸಣ್ಣ ಕಾಲೇಜುಗಳು ಅಸ್ತಿತ್ವ ಕಳಕೊಂಡಿವೆ. 

ಮುಚ್ಚಲಿರುವ ಕಾಲೇಜುಗಳ ಪಟ್ಟಿ

  • ಎಬಿಎ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸುರತ್ಕಲ್
  • ಅಂಜುಮನ್ ಪ್ರಥಮ ದರ್ಜೆ ಕಾಲೇಜು, ಮಂಗಳೂರು
  • ಅಮೃತ್ ಕಾಲೇಜು, ಪಡೀಲ್
  • ಸಿಲಿಕಾನ್ ಕಾಲೇಜ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್, ಕೊಂಚಾಡಿ
  • ಮೊಗ್ಲಿಂಗ್ ಇನ್ಸ್ಟಿಟ್ಯೂಟ್ ಆಫ್ ಜರ್ಮನ್ ಲ್ಯಾಂಗ್ವೇಜ್, ಬಲ್ಮಟ್ಟ
  • ಸಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಮಂಗಳೂರು
  • ರೊಸಾರಿಯೊ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್, ಬೋಳಾರ
  • ಕರಾವಳಿ ಕಾಲೇಜ್ ಆಫ್ ಎಜುಕೇಶನ್, ಕೊಟ್ಟಾರ 
  • ಪ್ರೇಮಕಾಂತಿ ಕಾಲೇಜ್ ಆಫ್ ಎಜುಕೇಶನ್
  • ಸಪಿಯೆಂಟ್ ಬೆಥನಿ ಪ್ರಥಮ ದರ್ಜೆ ಕಾಲೇಜು, ನೆಲ್ಯಾಡಿ
  • ಶಾರದಾ ಮಹಿಳಾ ಕಾಲೇಜು, ಸುಳ್ಯ
  • ರಾಮಕುಂಜೇಶ್ವರ ಕಾಲೇಜು ರಾಮಕುಂಜ 
  • ಹಝ್ರತ್ ಸಯ್ಯದ್ ಮದನಿ ಮಹಿಳಾ ಕಾಲೇಜು, ಉಳ್ಳಾಲ
  • ಸೇಂಟ್ ಸೆಬಾಸ್ಟಿಯನ್ ಕಾಲೇಜ್ ಆಫ್ ಕಾಮರ್ಸ್, ಉಳ್ಳಾಲ 
  • ಸೇಂಟ್ ಥಾಮಸ್ ಕಾಲೇಜು, ಬೆಳ್ತಂಗಡಿ
  • ಮಾರ್ ಇವಾನಿಯೋಸ್ ಕಾಲೇಜು, ಕಡಬ
  • ಮಾಧವ ಪೈ ಕಾಲೇಜು, ಮಣಿಪಾಲ
  • ಮೂಕಾಂಬಿಕಾ ಪ್ರಥಮ ದರ್ಜೆ ಕಾಲೇಜು, ಬೈಂದೂರು
  • ವರಸಿದ್ಧಿ ವಿನಾಯಕ ಪ್ರಥಮ ದರ್ಜೆ ಕಾಲೇಜು, ಕುಂದಾಪುರ
  • ಬಿ.ಡಿ. ಶೆಟ್ಟಿ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಈರೋಡಿ (ಉಡುಪಿ)
  • ವಿದ್ಯಾನಿಕೇತನ ಪ್ರಥಮ ದರ್ಜೆ ಕಾಲೇಜು, ಕಾಪು
  • ಕೃಷ್ಣಭಾಯಿ ವಾಸುದೇವ್ ಶೆಣೈ ಸ್ಮಾರಕ ಕಾಲೇಜು, ಕಟಪಾಡಿ 
  • ಅರೇಬಿಕ್ ಅಧ್ಯಯನ ಕೇಂದ್ರಕ್ಕೆ ಅನುಮತಿ 

ವಿವಿಯ ಸಭೆಯಲ್ಲಿ ಮತ್ತೊಂದು ಪ್ರಮುಖ ನಿರ್ಧಾರವಾಗಿ, ಅರೇಬಿಕ್ ಭಾಷೆಯ ಅಧ್ಯಯನ ಮತ್ತು ಸಂಶೋಧನೆಗಾಗಿ ‘ಅರೇಬಿಕ್ ಅಧ್ಯಯನ ಕೇಂದ್ರ’ ಸ್ಥಾಪಿಸಲು ರಾಜ್ಯಪಾಲರ ಅನುಮೋದನೆ ದೊರೆತಿದೆ ಎಂದು ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ.  ಕೇಂದ್ರವು ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿನ ಪ್ರಾದೇಶಿಕ ಅರೇಬಿಕ್ ಉಪಭಾಷೆಗಳು, ಸ್ಥಳೀಯ ಸಂಸ್ಕೃತಿ ಹಾಗೂ ಸಮುದಾಯಗಳ ಅಧ್ಯಯನಕ್ಕೆ ಒತ್ತು ನೀಡಲಿದೆ ಎಂದು ಅವರು ಹೇಳಿದರು.

ಶೈಕ್ಷಣಿಕ ನವೀಕರಣಗಳಿಗೆ ಒಪ್ಪಿಗೆ

ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಹಲವು ಪಠ್ಯಕ್ರಮ ಸಂಬಂಧಿತ ನಿರ್ಧಾರಗಳನ್ನೂ ಕೈಗೊಳ್ಳಲಾಗಿದೆ:
ಬಿಎ ಅರ್ಥಶಾಸ್ತ್ರ ಪದವಿಯ ನಾಲ್ಕನೇ ಸೆಮಿಸ್ಟರ್‌ಗೆ ಕೌಶಲ್ಯಾಧಾರಿತ ಕೋರ್ಸ್‌ಗಳನ್ನು ಅನುಮೋದಿಸಲಾಗಿದೆ. ಬಿಎ ಪತ್ರಿಕೋದ್ಯಮದ ಮೂರನೇ ಮತ್ತು ನಾಲ್ಕನೇ ಸೆಮಿಸ್ಟರ್‌ಗಳಿಗೆ ಚುನಾಯಿತ (Elective) ಕೋರ್ಸ್‌ಗಳಿಗೆ ಒಪ್ಪಿಗೆ ನೀಡಲಾಗಿದೆ. ಎಲ್ಲಾ ಡೀನ್‌ಗಳು ಸಿದ್ಧಪಡಿಸಿರುವ ಪರಿಷ್ಕೃತ ಪಿಎಚ್‌ಡಿ ಕಾರ್ಯಕ್ರಮ ಮಾರ್ಗಸೂಚಿಗಳನ್ನು ಹೊಸ ಡಾಕ್ಟರೇಟ್ ಕೋರ್ಸ್‌ಗಳ ಪ್ರಾರಂಭಕ್ಕಾಗಿ ಅನುಮೋದಿಸಲಾಗಿದೆ.

Due to a drastic decline in student admissions, Mangalore University has approved the closure of 22 private colleges under its jurisdiction in Dakshina Kannada and Udupi districts. The decision was finalized during the Academic Council meeting chaired by Vice-Chancellor Prof. P.L. Dharma.