ಬ್ರೇಕಿಂಗ್ ನ್ಯೂಸ್
31-12-25 09:16 pm Mangalore Correspondent ಕರಾವಳಿ
ಮಂಗಳೂರು, ಡಿ.31: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಎಲ್ಲಿಯವರು, ಅವರು ಇಲ್ಲಿ ಬಂದು ನೆಲೆಸಲು ಕಾರಣವೇನು ಎಂಬುದು ಸೇರಿದಂತೆ ಸಮಗ್ರ ತನಿಖೆಗೆ ಸರಕಾರ ವಿಶೇಷ ತನಿಖಾ ತಂಡ ರಚನೆ ಮಾಡಿ ಸತ್ಯಾಂಶ ಬಯಲಿಗೆಳೆಯಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಆಗ್ರಹಿಸಿದ್ದಾರೆ.
ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ಟೆಂಟ್ ಅಳವಡಿಸಿ ಕುಳಿತವರಿಗೆ ಉಚಿತವಾಗಿ ಮನೆ ಕಟ್ಟಿಸುವ ನಿರ್ಧಾರಕ್ಕೆ ಕಾಂಗ್ರೆಸ್ ಸರಕಾರ ಬಂದಿದೆ. ಕೇರಳದ ರಾಜಕೀಯ ಮುಖಂಡರ ಒತ್ತಡಕ್ಕೆ ಮಣಿದು ರಾಜ್ಯದಲ್ಲಿ ಈ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಬಡವರಿಗೆ ಸರಕಾರ ಒಂದೂ ಮನೆ ಕಟ್ಟಿಸಿಕೊಟ್ಟಿಲ್ಲ. ಹೀಗಿರುವಾಗ ಹೊರ ರಾಜ್ಯದ ವಲಸಿಗರಿಗೆ ಮನೆ ಕಟ್ಟಿಸಿಕೊಡುವ ಔಚಿತ್ಯವೇನಿದೆ? ಈ ಬೆಳವಣಿಗೆಯ ಹಿಂದೆ ಸಚಿವ ಜಮೀರ್ ಅಹ್ಮದ್ ಅವರ ಕೈವಾಡವಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು.
ಕೋಗಿಲು ಬಡಾವಣೆಯಲ್ಲಿ 2023ರ ಬಳಿಕ ವಲಸಿಗರ ಸಂಖ್ಯೆ ಹೆಚ್ಚಾಗಿದೆ. 2023ರ ಹಿಂದೆ ಗೂಗಲ್ ಮ್ಯಾಪ್ ನೋಡಿದಾಗ ಈ ವಿಚಾರ ಬೆಳಕಿಗೆ ಬರುತ್ತದೆ. ಸದ್ಯ ಅಲ್ಲಿನ ಎಲ್ಲಾ ಜಾಗವನ್ನು ಒತ್ತುವರಿ ಮಾಡಿದ್ದು, ಇದರ ಹಿಂದೆ ಪಿತೂರಿ ಅಡಗಿದೆ ಎಂದರು.
ಮುಸಲ್ಮಾನರ ಮತ ಬೇಟೆಗಾಗಿ ರಾಜ್ಯ ಸರಕಾರ ಈ ಕೆಲಸಕ್ಕಿಳಿದಿದೆ. ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹಮ್ಮದ್ ಅವರ ಜಮೀನಿನಲ್ಲಿ ನಾವು ಒತ್ತುವರಿ ಮಾಡಿದರೆ, ಸರಕಾರ ನಮಗೆ ಮನೆ ಕಟ್ಟಿಸಿಕೊಡುತ್ತದೆಯೇ? ಎಂದು ಪ್ರಶ್ನೆ ಮಾಡಿದರು.
ಈ ಹಿಂದೆ ರಾಜ್ಯದಲ್ಲಿ ಪ್ರಾಕೃತಿಕ ವಿಕೋಪದಿಂದ ಅನೇಕ ಮಂದಿ ಮನೆ ಕಳೆದುಕೊಂಡಿದ್ದರು. ಅವರಿಗೆ ಮನೆ ನಿರ್ಮಿಸಿಕೊಡಲು ರಾಜ್ಯ ಸರ್ಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲ. ಈಗ ಪಶ್ಚಿಮ ಬಂಗಾಳ, ಉತ್ತರ ಪ್ರದೇಶದಿಂದ ಬಂದು ನೆಲೆಸಿದವರಿಗೆ ಮುಸ್ಲಿಮರು ಎನ್ನುವ ಕಾರಣಕ್ಕೆ ಮನೆ ಕಟ್ಟಿಸಿಕೊಡುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಹಾಗಾದರೆ ಈ ರಾಜ್ಯದ ಬಡವರು ಮನೆಗಳನ್ನು ಪಡೆಯುವ ಅರ್ಹತೆ ಹೊಂದಿಲ್ಲವೇ.. ಸರಕಾರದ ಈ ನೀತಿ ಕ್ಷಮಿಸಲಾಗದ್ದು. ಜನರೂ ಇದಕ್ಕೆ ಕ್ಷಮೆ ನೀಡಲಾರರು ಎಂದು ಹೇಳಿದರು.
Mangalore North MLA Dr. Y. Bharath Shetty has demanded that the State Government set up a Special Investigation Team (SIT) to conduct a thorough probe into the illegal migrants settled in Bengaluru’s Kogilu slum area.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm