ಬ್ರೇಕಿಂಗ್ ನ್ಯೂಸ್
03-01-26 06:51 pm Mangalore Correspondent ಕರಾವಳಿ
ಮಂಗಳೂರು, ಜ.3: ನಗರದ ಕಾವೂರು ಬಳಿಯ ಮರಕಡದಲ್ಲಿ ಟೈರ್ ಬ್ಲಾಸ್ಟ್ ಆಗಿ ಕಾರೊಂದು ರಸ್ತೆಯಿಂದ ಹೊರಕ್ಕೆ ಎಸೆಯಲ್ಪಟ್ಟು ಮನೆ ಕಟ್ಟಡಕ್ಕೆ ಬಡಿದು ಪಲ್ಟಿಯಾದ ಘಟನೆ ನಡೆದಿದ್ದು ಕಾರನ್ನು ಚಲಾಯಿಸುತ್ತಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು. ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ ಹಿಂತಿರುಗುತ್ತಿದ್ದರು. ಇವರ ಕಾರು ಮರಕಡದ ಮೂಲಕ ಬೋಂದೆಲ್ ನತ್ತ ಬರುತ್ತಿದ್ದಾಗ ಒಂದು ಟೈರ್ ಬ್ಲಾಸ್ಟ್ ಆಗಿದ್ದು ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಕ್ಕೆ ಹೋಗಿದ್ದು ರಸ್ತೆ ಪಕ್ಕದ ಗುಂಡಿಯಲ್ಲಿರುವ ಕಟ್ಟಡಕ್ಕೆ ಬಡಿದು ಪಲ್ಟಿಯಾಗಿ ಬಿದ್ದಿದೆ.


ಕಾರು ಹಾರಿ ಬಂದು ಪಲ್ಟಿಯಾಗಿ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಿಮೀಯ ರೀತಿಯ ಅಪಘಾತ ನಡೆದಿದ್ದರೂ, ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಗಂಭೀರ ಅಪಘಾತಗಳಿಲ್ಲದೆ ಪಾರಾಗಿದ್ದಾರೆ. ಕಾರು ರಸ್ತೆ ಬದಿಗೆ ವೇಗವಾಗಿ ಹರಿದು ಹಾರಿ ಬಿದ್ದುದನ್ನು ಸ್ಥಳೀಯರು ಗಮನಿಸಿದ್ದು ಕೂಡಲೇ ಕಾರನ್ನು ಎತ್ತಿ ಅದರ ಎಡೆಯಲ್ಲಿ ಸಿಲುಕಿದ್ದ ಪಾದ್ರಿಯನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು ಚಾಲಕ ಬದುಕುಳಿದಿದ್ದೇ ಪವಾಡ ಎಂದು ಜನರಾಡುತ್ತಿದ್ದಾರೆ.
A car lost control near #Marakada in #Mangalore and flipped after crashing into a roadside building. The driver — #FrAndrewLeoDSouza of #Bondel St. #LawrenceChurch — miraculously escaped without serious injuries. CCTV footage of the incident has gone #viral. #caraccident pic.twitter.com/FrXotrYemw
— Headline Karnataka (@hknewsonline) January 3, 2026
A dramatic accident occurred near Marakada in Kavoor, Mangaluru, when a tyre burst caused a speeding car to lose control, jump off the road, hit a building, and overturn. The vehicle was driven by Fr. Andrew Leo D’Souza of St. Lawrence Church, Bondel, who miraculously escaped without major injuries.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm