ಬ್ರೇಕಿಂಗ್ ನ್ಯೂಸ್
04-01-26 01:57 pm Mangalore Correspondent ಕರಾವಳಿ
ಮಂಗಳೂರು, ಜ.4: ಧರ್ಮಸ್ಥಳ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ವರದಿಯನ್ವಯ ಬೆಳ್ತಂಗಡಿ ಜೆಎಂಎಫ್ ಕೋರ್ಟ್ ಆರೋಪಿಗಳ ವಿರುದ್ಧ ಕ್ರಮಕ್ಕೆ ಅನುಮತಿ ನೀಡಿಲ್ಲ. ಅಂತಿಮ ವರದಿ ನೀಡಿದ ಬಳಿಕವೇ ಈ ಕುರಿತು ಆದೇಶ ನೀಡುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ಹಿಂದೆ ನಡೆದಿದೆ ಎನ್ನಲಾದ ಹೆಣ ಹೂತ ಪ್ರಕರಣ ಸಂಬಂಧಿಸಿ ಆರು ತಿಂಗಳಿನಿಂದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಕಳೆದ ನವೆಂಬರ್ 20ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿ ನೀಡಿತ್ತು. ಮುಂದೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು, ಆರೋಪಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಅನುಮತಿ ನೀಡಬೇಕು ಎಂಬ ಕೋರಿಕೆಗೆ ಡಿ.27ರಂದು ಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇತ್ತು. ಆನಂತರ, ತೀರ್ಪು ಮುಂದೂಡಿದ್ದ ಕೋರ್ಟ್ ಇದೀಗ ಎಸ್ಐಟಿ ಅಂತಿಮ ವರದಿ ಸಲ್ಲಿಸಿದ ಬಳಿಕವಷ್ಟೇ ಈ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದೆ.
ಧರ್ಮಸ್ಥಳ ಪ್ರಕರಣದಲ್ಲಿ ತನಿಖೆ ನಡೆಸಿದ ಎಸ್ಐಟಿ ದೂರು ನೀಡಿದ್ದ ಚಿನ್ನಯ್ಯನನ್ನೇ ಬಂಧಿಸಿತ್ತು. ಆದರೆ ಆರೋಪಿಯನ್ನು ಬಂಧಿಸಿದ 90 ದಿನಗಳಲ್ಲಿ ಎಸ್ಐಟಿ ವರದಿ ನೀಡಬೇಕಾಗಿತ್ತು. ಆದರೆ ವಿವಿಧ ಕಾರಣಗಳಿಂದಾಗಿ ಎಸ್ಐಟಿ ವರದಿಯನ್ನು ವಿಳಂಬಿಸಿ ಕೊನೆಗೆ 3900 ಪುಟಗಳ ವರದಿಯನ್ನು ಕೋರ್ಟಿಗೆ ಸಲ್ಲಿಸಿತ್ತು. ತನಿಖೆಯ ದಾರಿ ತಪ್ಪಿಸಿದ್ದಾಗಿ ಹೇಳಿ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್, ವಿಠಲ ಗೌಡ, ಸುಜಾತಾ ಭಟ್ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ನೀಡಬೇಕೆಂದು ಕೋರ್ಟಿಗೆ ಕೇಳಿಕೊಂಡಿತ್ತು.
ವರದಿಯ ಬಗ್ಗೆ ಸದ್ಯಕ್ಕೆ ಯಾವುದೇ ಆದೇಶ ಪ್ರಕಟಿಸುವುದಿಲ್ಲ, ತನಿಖೆಯ ಅಂತಿಮ ವರದಿ ಸಲ್ಲಿಸಿದ ಬಳಿಕವೇ ತೀರ್ಪು ಪ್ರಕಟಿಸುವುದಾಗಿ ನ್ಯಾಯಾಧೀಶರಾದ ಟಿ.ಎಚ್ ವಿಜಯೇಂದ್ರ ತಿಳಿಸಿದ್ದಾರೆ. ಇದೇ ವೇಳೆ, ಧರ್ಮಸ್ಥಳ ಕ್ಷೇತ್ರವನ್ನು ಸಂತ್ರಸ್ತ ಎಂದು ಪರಿಗಣಿಸಿ ವಾದ ಮಂಡನೆಗೆ ಅವಕಾಶ ನೀಡುವಂತೆ ದೇವಸ್ಥಾನ ಪರವಾಗಿ ಹೈಕೋರ್ಟ್ ಹಿರಿಯ ವಕೀಲ ಸಿವಿ ನಾಗೇಶ್ ಹಾಜರಾಗಿದ್ದಾರೆ. ಈ ಬಗ್ಗೆ ಆಕ್ಷೇಪ ಸಲ್ಲಿಸಲು ಕಾಲಾವಕಾಶ ಕೇಳಿದ್ದರಿಂದ ನ್ಯಾಯಾಲಯ ವಿಚಾರಣೆಯನ್ನು ಜ.23ಕ್ಕೆ ಮುಂದೂಡಿದೆ.
In a significant development in the Dharmasthala buried-body case, the Belthangady JMFC Court has refused to grant permission to proceed against the accused based on the SIT’s preliminary report. The court stated that it will issue any order only after the SIT submits its final report.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am