ಬ್ರೇಕಿಂಗ್ ನ್ಯೂಸ್
31-12-20 11:21 am Mangalore Correspondent ಕರಾವಳಿ
ಮಂಗಳೂರು, ಡಿ. 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದುಕೊಂಡರೆ, 982 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ 160 ಸ್ಥಾನಗಳನ್ನು ಮತ್ತು 40 ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಬಿಜೆಪಿ ಬೆಂಬಲಿತರು ಪಾರಮ್ಯ ಕಂಡಿದ್ದಾರೆ. ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಪಡೆದರೆ, ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಈ ಮೂಲಕ ನಗರ ಪ್ರದೇಶವಾದ ಈ ಮೂರು ತಾಲೂಕು ಭಾಗದಲ್ಲಿ ಹೆಚ್ಚಿನ ಕಡೆ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯುವ ಸೂಚನೆ ಲಭಿಸಿದೆ.

ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 1100 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರೆ, ಕಾಂಗ್ರೆಸ್ ಕೇವಲ 450 ಸ್ಥಾನಗಳನ್ನು ಗಳಿಸಿದೆ. ಎಸ್ ಡಿಪಿಐ ಬೆಂಬಲಿತರು ಎಂಟು ಸ್ಥಾನಗಳನ್ನು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿ ಅವಿರೋಧ ಆಯ್ಕೆಯಾಗಿದ್ದರು.
ಹೀಗಿದ್ದರೂ, ಪೂರ್ತಿಯಾಗಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3131 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2863 ಸ್ಥಾನಗಳ ಫಲಿತಾಂಶ ಬಂದಿದೆ. ಉಡುಪಿಯಲ್ಲಿ 2385 ಸ್ಥಾನಗಳಲ್ಲಿ 1750 ಸ್ಥಾನಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ.
Gram Panchayat Elections 2020 BJP Bags major Victory in Sullia, Belthangady, Puttur, Moodbidri and Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm