ಬ್ರೇಕಿಂಗ್ ನ್ಯೂಸ್
31-12-20 11:21 am Mangalore Correspondent ಕರಾವಳಿ
ಮಂಗಳೂರು, ಡಿ. 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದುಕೊಂಡರೆ, 982 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ 160 ಸ್ಥಾನಗಳನ್ನು ಮತ್ತು 40 ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಬಿಜೆಪಿ ಬೆಂಬಲಿತರು ಪಾರಮ್ಯ ಕಂಡಿದ್ದಾರೆ. ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಪಡೆದರೆ, ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಈ ಮೂಲಕ ನಗರ ಪ್ರದೇಶವಾದ ಈ ಮೂರು ತಾಲೂಕು ಭಾಗದಲ್ಲಿ ಹೆಚ್ಚಿನ ಕಡೆ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯುವ ಸೂಚನೆ ಲಭಿಸಿದೆ.

ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 1100 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರೆ, ಕಾಂಗ್ರೆಸ್ ಕೇವಲ 450 ಸ್ಥಾನಗಳನ್ನು ಗಳಿಸಿದೆ. ಎಸ್ ಡಿಪಿಐ ಬೆಂಬಲಿತರು ಎಂಟು ಸ್ಥಾನಗಳನ್ನು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿ ಅವಿರೋಧ ಆಯ್ಕೆಯಾಗಿದ್ದರು.
ಹೀಗಿದ್ದರೂ, ಪೂರ್ತಿಯಾಗಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3131 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2863 ಸ್ಥಾನಗಳ ಫಲಿತಾಂಶ ಬಂದಿದೆ. ಉಡುಪಿಯಲ್ಲಿ 2385 ಸ್ಥಾನಗಳಲ್ಲಿ 1750 ಸ್ಥಾನಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ.
Gram Panchayat Elections 2020 BJP Bags major Victory in Sullia, Belthangady, Puttur, Moodbidri and Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm